Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...