Homeಚಳವಳಿರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

ರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

- Advertisement -
- Advertisement -

ಕ್ರಾಂತಿಕಾರಿ ಹುತಾತ್ಮ ಭಗತ್ ಸಿಂಗ್ ಅವರು 114ನೇ ಜನ್ಮ ದಿನದಂದು ಅವರ ಧೈರ್ಯ, ಅರ್ಪಣಾ ಮನೋಭಾವ, ವಿಚಾರಧಾರೆ ಮತ್ತು ಜೀವನಾದರ್ಶಗಳನ್ನು ಇಡೀ ದೇಶ ನೆನಪಿಸಿಕೊಂಡಿದೆ. ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕೂಡ ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಶಹಜಾನ್‌ಪುರ, ಗಾಝಿಪುರ್‌ ಗಡಿಗಳಲ್ಲಿ ರೈತರು ಕಾರ್ಯಕ್ರಮಗಳನ್ನು ಆಯೋಜಿಸಿ, ಭಗತ್ ಸಿಂಗ್ ವಿಚಾರಧಾರೆಗಳನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಜೊತೆಗೆ ಪಂಜಾಬ್‌ನಲ್ಲಿ ಇಂದು ಭಾರಿ ಕಾರ್ಯಕ್ರಮಗಳ ಮೂಲಕ ರೈತರು ಹುತಾತ್ಮ ಭಗತ್ ಸಿಂಗ್‌ಗೆ ಗೌರವ ಸಮರ್ಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜನರಿಗಾಗಿ ತನ್ನ ಜೀವವನ್ನು ಅರ್ಪಿಸಿದ ಭಾರತದ ಹೆಮ್ಮೆಯ ಮಗನನ್ನು ಎಲ್ಲ ಪ್ರತಿಭಟನಾ ಸ್ಥಳಗಳಲ್ಲಿ ಸ್ಮರಿಸಲಾಯಿತು. ಭಗತ್ ಸಿಂಗ್ ಅವರ ತ್ಯಾಗವು ರೈತರಿಗೆ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಸ್ಫೂರ್ತಿ ನೀಡುತ್ತದೆ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಛತ್ತೀಸ್‌ಗಢದ ಕಿಸಾನ್ ಮಜ್ದೂರ್ ಮಹಾಸಂಘದಿಂದ ಛತ್ತೀಸ್‌ಗಢದ ರಾಜೀಮ್‌ನಲ್ಲಿ ನಡೆದ ಬೃಹತ್ ಕಿಸಾನ್ ಮಹಾಪಂಚಾಯತ್‌ನಲ್ಲಿ ಎಸ್‌ಕೆಎಂ ನಾಯಕರು ಭಾಗಿಯಾಗಿದ್ದರು. ಲಕ್ಷಾಂತರ ರೈತರು ಭಾಗಿಯಾಗಿದ್ದ ಈ ಮಹಾಪಂಚಾಯತ್‌ನಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಮಹಾಪಂಚಾಯತ್ ಆರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದೆ. ರೈತ ವಿರೋಧಿ ಕೃಷಿ ಮತ್ತು ಗ್ರಾಹಕರ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯಲ್ಲಿ ಖಾರಿಫ್ ಋತುವಿನ ಭತ್ತವನ್ನು ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಕ್ವಿಂಟಾಲ್‌ಗೆ ಖರೀದಿಸಬೇಕು. ನೀರಾವರಿ ಸಂಪನ್ಮೂಲಗಳನ್ನು ಹೆಚ್ಚಿಸಬೇಕು. ಬೆಳೆ ವೈವಿಧ್ಯತೆಯನ್ನು ಉತ್ತೇಜಿಸಬೇಕು. ಕೃಷಿ ಭೂಮಿಯನ್ನು ಬೇರೆ ಇತರೆ ಕಾರಣಗಳಿಗಾಗಿ ಸ್ವಾಧೀನ ಪಡಿಸಿಕೊಳ್ಳಬಾರದು ಮತ್ತು ಬುಡಕಟ್ಟು ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಚಳವಳಿಗಳ ಮೇಲಿನ ದಮನವನ್ನು ನಿಲ್ಲಿಸಬೇಕು ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...