Homeಮುಖಪುಟಉಪ ಕುಲಪತಿಗಳ 'ಎಕ್ಸ್‌' ಖಾತೆ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ನೋಟಿಸ್ ಕೊಟ್ಟ ಶಹೀದ್ ಭಗತ್ ಸಿಂಗ್...

ಉಪ ಕುಲಪತಿಗಳ ‘ಎಕ್ಸ್‌’ ಖಾತೆ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ನೋಟಿಸ್ ಕೊಟ್ಟ ಶಹೀದ್ ಭಗತ್ ಸಿಂಗ್ ಕಾಲೇಜು

- Advertisement -
- Advertisement -

ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ದೆಹಲಿ ವಿಶ್ವವಿದ್ಯಾಲಯದ ಉಪ ಕುಲಪತಿಗಳ ಎಕ್ಸ್‌ ಖಾತೆಯನ್ನು ಫಾಲೋ ಮಾಡುವಂತೆ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸಿದ್ದು, ವಿವಾದದ ಬಳಿಕ ಸೂಚನೆಯನ್ನು ಹಿಂತೆಗೆದುಕೊಂಡಿದೆ.

ದೆಹಲಿ ವಿಶ್ವವಿದ್ಯಾಲಯದ ಶಹೀದ್ ಭಗತ್ ಸಿಂಗ್ ಕಾಲೇಜಿನ ಆಡಳಿ ಮಂಡಳಿ ತನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಕುಲಪತಿ ಯೋಗೇಶ್ ಸಿಂಗ್ ಅವರ ಅಧಿಕೃತ ಎಕ್ಸ್‌ ಹ್ಯಾಂಡಲ್ ಅನ್ನು ಫಾಲೋ ಮಾಡುವಂತೆ ಹಾಗೂ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುವ ಅವರ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸಿತು. ಆದರೆ, ಟೀಕೆಗಳ ಹಿನ್ನೆಲೆಯಲ್ಲಿ ನೋಟಿಸ್ ಅನ್ನು ಹಿಂತೆಗೆದುಕೊಂಡಿತು.

“ಸಶಸ್ತ್ರ ಪಡೆಗಳ ನೈತಿಕತೆಯನ್ನು ಹೆಚ್ಚಿಸಲು ನೋಟಿಸ್ ನೀಡಲಾಗಿದೆ; ಉಪಕುಲಪತಿಗಳಿಗೂ ಹಾಗೂ ಈ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ” ಎಂದು ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಅಟ್ರೀ ಅವರು ವಿವರಿಸಿದರು. “ಕೆಲವರು ಒಳ್ಳೆಯ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ” ಎಂದು ಕಾಲೇಜು ಪ್ರಾಂಶುಪಾಲರು ತಮ್ಮ ಆದೇಶವನ್ನು ಸಮರ್ಥಿಸಿಕೊಂಡಿದ್ದಾರೆ.

ಮೇ 12 ನೀಡಿದ್ದ, ಈಗ ಹಿಂತೆಗೆದುಕೊಳ್ಳಲಾದ ಸೂಚನೆಯಲ್ಲಿ, “ಕಾಲೇಜಿನ ಎಲ್ಲಾ ಶಿಕ್ಷಕರು, ಸಿಬ್ಬಂದಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಕುಲಪತಿ ಪ್ರೊ. ಯೋಗೇಶ್ ಸಿಂಗ್ ಅವರ ಅಧಿಕೃತ ಟ್ವಿಟರ್ (ಈಗ ಎಕ್ಸ್‌) ಖಾತೆಯನ್ನು ಅನುಸರಿಸಲು ಇಲ್ಲಿ ವಿನಂತಿಸಲಾಗಿದೆ” ಎಂದು ಹೇಳಲಾಗಿತ್ತು. ದೇಶದ ರಕ್ಷಣಾ ಪಡೆಗಳಿಗೆ ಬೆಂಬಲ ಮತ್ತು ಕೃತಜ್ಞತೆಯ ಸಂಕೇತವಾಗಿ ಕಾಲೇಜು ಸಮುದಾಯದ ಸದಸ್ಯರು “ಎಕ್ಸ್‌ ಮೂಲಕ ಹಂಚಿಕೊಂಡ ಪೋಸ್ಟ್‌ಗಳನ್ನು ಮರುಟ್ವೀಟ್ ಮಾಡಲು ಪ್ರೋತ್ಸಾಹಿಸಲಾಗುತ್ತದೆ” ಎಂದು ಅದು ಹೇಳಿದೆ.

“ಈ ಸಂದೇಶಗಳನ್ನು ವರ್ಧಿಸುವ ಮೂಲಕ, ನಾವು ಅವರ ಧೈರ್ಯ ಮತ್ತು ತ್ಯಾಗಗಳ ಬಗ್ಗೆ ಜಾಗೃತಿ ಮೂಡಿಸುವುದಲ್ಲದೆ, ನಮ್ಮ ಸಮುದಾಯದಲ್ಲಿ ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಬಲವಾದ ಪ್ರಜ್ಞೆಯನ್ನು ನಿರ್ಮಿಸಲು ಕೊಡುಗೆ ನೀಡುತ್ತೇವೆ” ಎಂದು ಕಾಲೇಜು ಪ್ರಾಂಶುಪಾಲರ ಸಹಿಯನ್ನು ಹೊಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಕಾಲೇಜಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನೋಟಿಸ್ ಈಗ ಲಭ್ಯವಿಲ್ಲ.

ಬೆಳವಣಿಗೆಗಳನ್ನು ವಿವರಿಸಿದ ಪ್ರಾಂಶುಪಾಲ ಅಟ್ರೀ, “ನಮ್ಮ ಸಶಸ್ತ್ರ ಪಡೆಗಳ ನೈತಿಕತೆಯನ್ನು ಹೆಚ್ಚಿಸಲು ಯುಜಿಸಿಯ ರಾಷ್ಟ್ರ ಮೊದಲು ಅಭಿಯಾನದ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಈ ನೋಟಿಸ್‌ಗೆ ಡಿಯು ವಿಸಿ ಯೋಗೇಶ್ ಸಿಂಗ್‌ಗೂ ಯಾವುದೇ ಸಂಬಂಧವಿಲ್ಲ. ಕೆಲವರು ಒಳ್ಳೆಯ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಕಾಲೇಜು ಆಡಳಿತವು ನೋಟಿಸ್ ಅನ್ನು ಹಿಂತೆಗೆದುಕೊಂಡಿದೆ” ಎಂದರು.

ಕಾಲೇಜಿನ ಸೂಚನೆಯನ್ನು ಟೀಕಿಸಿದ ಡಿಯು ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಪ್ರೊಫೆಸರ್ ಮಾಯಾ ಜಾನ್, “ಎಕ್ಸ್‌ನಲ್ಲಿ ಯಾರನ್ನಾದರೂ ಅನುಸರಿಸುವುದು ಅಥವಾ ಅನುಸರಿಸದಿರುವುದು ಒಬ್ಬರ ಸ್ವಂತ ಆದ್ಯತೆಯನ್ನು ಅವಲಂಬಿಸಿರುತ್ತದೆ. ಅಧಿಕಾರದಲ್ಲಿರುವ ಇನ್ನೊಬ್ಬ ವ್ಯಕ್ತಿ ಅಧಿಕಾರದಲ್ಲಿರುವ ವ್ಯಕ್ತಿಯನ್ನು ಅನುಸರಿಸಲು ನಿರ್ದೇಶನ ನೀಡುವುದು ಕೇವಲ ವಿಚಿತ್ರವಲ್ಲ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಅಧೀನತೆಯ ಸಂಸ್ಕೃತಿಯನ್ನು ಉತ್ತೇಜಿಸುತ್ತದೆ. ಡಿಯು ಕಾಲೇಜು ಪ್ರಾಂಶುಪಾಲರ ಈ ನಿರ್ದೇಶನವು ಅತ್ಯಂತ ಖಂಡನೀಯ” ಎಂದು ನಿರ್ಧಾರವನ್ನು ವಿರೋಧಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಸಿಂಗ್ ಈ ತಿಂಗಳ ಆರಂಭದಲ್ಲಿ ಎಕ್ಸ್‌ಗೆ ಸೇರಿದರು. ಮೇ 8 ರಂದು ತಮ್ಮ ಮೊದಲ ಪೋಸ್ಟ್ ಮಾಡಿದರು.

ಮೇ 12 ರಂದು, ಅವರು ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್ ಮಾಡಿದರು. ಇದನ್ನು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಪಡೆಗಳು ನಡೆಸಿವೆ ಎಂದು ಅವರು ಹೇಳಿದರು.

ಹಿಂದಿಯಲ್ಲಿರುವ ಪೋಸ್ಟ್‌ ಮಾಡಿರುವ ಸಿಂಗ್, “ಭಾರತೀಯ ಪಡೆಗಳು ಪಾಕಿಸ್ತಾನಿ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದವು, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ತಟಸ್ಥಗೊಳಿಸಿದವು, ಇದರಲ್ಲಿ (ವಿಮಾನ) ಐಸಿ-814 ಮತ್ತು ಪುಲ್ವಾಮಾ ಭಯೋತ್ಪಾದಕರು ಸೇರಿದ್ದಾರೆ” ಎಂದು ಹೇಳಿದರು.

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡನೇ ದಲಿತ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...