Homeಮುಖಪುಟಉಪ ಕುಲಪತಿಗಳ 'ಎಕ್ಸ್‌' ಖಾತೆ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ನೋಟಿಸ್ ಕೊಟ್ಟ ಶಹೀದ್ ಭಗತ್ ಸಿಂಗ್...

ಉಪ ಕುಲಪತಿಗಳ ‘ಎಕ್ಸ್‌’ ಖಾತೆ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ನೋಟಿಸ್ ಕೊಟ್ಟ ಶಹೀದ್ ಭಗತ್ ಸಿಂಗ್ ಕಾಲೇಜು

- Advertisement -
- Advertisement -

ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ದೆಹಲಿ ವಿಶ್ವವಿದ್ಯಾಲಯದ ಉಪ ಕುಲಪತಿಗಳ ಎಕ್ಸ್‌ ಖಾತೆಯನ್ನು ಫಾಲೋ ಮಾಡುವಂತೆ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸಿದ್ದು, ವಿವಾದದ ಬಳಿಕ ಸೂಚನೆಯನ್ನು ಹಿಂತೆಗೆದುಕೊಂಡಿದೆ.

ದೆಹಲಿ ವಿಶ್ವವಿದ್ಯಾಲಯದ ಶಹೀದ್ ಭಗತ್ ಸಿಂಗ್ ಕಾಲೇಜಿನ ಆಡಳಿ ಮಂಡಳಿ ತನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಕುಲಪತಿ ಯೋಗೇಶ್ ಸಿಂಗ್ ಅವರ ಅಧಿಕೃತ ಎಕ್ಸ್‌ ಹ್ಯಾಂಡಲ್ ಅನ್ನು ಫಾಲೋ ಮಾಡುವಂತೆ ಹಾಗೂ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುವ ಅವರ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸಿತು. ಆದರೆ, ಟೀಕೆಗಳ ಹಿನ್ನೆಲೆಯಲ್ಲಿ ನೋಟಿಸ್ ಅನ್ನು ಹಿಂತೆಗೆದುಕೊಂಡಿತು.

“ಸಶಸ್ತ್ರ ಪಡೆಗಳ ನೈತಿಕತೆಯನ್ನು ಹೆಚ್ಚಿಸಲು ನೋಟಿಸ್ ನೀಡಲಾಗಿದೆ; ಉಪಕುಲಪತಿಗಳಿಗೂ ಹಾಗೂ ಈ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ” ಎಂದು ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಅಟ್ರೀ ಅವರು ವಿವರಿಸಿದರು. “ಕೆಲವರು ಒಳ್ಳೆಯ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ” ಎಂದು ಕಾಲೇಜು ಪ್ರಾಂಶುಪಾಲರು ತಮ್ಮ ಆದೇಶವನ್ನು ಸಮರ್ಥಿಸಿಕೊಂಡಿದ್ದಾರೆ.

ಮೇ 12 ನೀಡಿದ್ದ, ಈಗ ಹಿಂತೆಗೆದುಕೊಳ್ಳಲಾದ ಸೂಚನೆಯಲ್ಲಿ, “ಕಾಲೇಜಿನ ಎಲ್ಲಾ ಶಿಕ್ಷಕರು, ಸಿಬ್ಬಂದಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಕುಲಪತಿ ಪ್ರೊ. ಯೋಗೇಶ್ ಸಿಂಗ್ ಅವರ ಅಧಿಕೃತ ಟ್ವಿಟರ್ (ಈಗ ಎಕ್ಸ್‌) ಖಾತೆಯನ್ನು ಅನುಸರಿಸಲು ಇಲ್ಲಿ ವಿನಂತಿಸಲಾಗಿದೆ” ಎಂದು ಹೇಳಲಾಗಿತ್ತು. ದೇಶದ ರಕ್ಷಣಾ ಪಡೆಗಳಿಗೆ ಬೆಂಬಲ ಮತ್ತು ಕೃತಜ್ಞತೆಯ ಸಂಕೇತವಾಗಿ ಕಾಲೇಜು ಸಮುದಾಯದ ಸದಸ್ಯರು “ಎಕ್ಸ್‌ ಮೂಲಕ ಹಂಚಿಕೊಂಡ ಪೋಸ್ಟ್‌ಗಳನ್ನು ಮರುಟ್ವೀಟ್ ಮಾಡಲು ಪ್ರೋತ್ಸಾಹಿಸಲಾಗುತ್ತದೆ” ಎಂದು ಅದು ಹೇಳಿದೆ.

“ಈ ಸಂದೇಶಗಳನ್ನು ವರ್ಧಿಸುವ ಮೂಲಕ, ನಾವು ಅವರ ಧೈರ್ಯ ಮತ್ತು ತ್ಯಾಗಗಳ ಬಗ್ಗೆ ಜಾಗೃತಿ ಮೂಡಿಸುವುದಲ್ಲದೆ, ನಮ್ಮ ಸಮುದಾಯದಲ್ಲಿ ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಬಲವಾದ ಪ್ರಜ್ಞೆಯನ್ನು ನಿರ್ಮಿಸಲು ಕೊಡುಗೆ ನೀಡುತ್ತೇವೆ” ಎಂದು ಕಾಲೇಜು ಪ್ರಾಂಶುಪಾಲರ ಸಹಿಯನ್ನು ಹೊಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಕಾಲೇಜಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನೋಟಿಸ್ ಈಗ ಲಭ್ಯವಿಲ್ಲ.

ಬೆಳವಣಿಗೆಗಳನ್ನು ವಿವರಿಸಿದ ಪ್ರಾಂಶುಪಾಲ ಅಟ್ರೀ, “ನಮ್ಮ ಸಶಸ್ತ್ರ ಪಡೆಗಳ ನೈತಿಕತೆಯನ್ನು ಹೆಚ್ಚಿಸಲು ಯುಜಿಸಿಯ ರಾಷ್ಟ್ರ ಮೊದಲು ಅಭಿಯಾನದ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಈ ನೋಟಿಸ್‌ಗೆ ಡಿಯು ವಿಸಿ ಯೋಗೇಶ್ ಸಿಂಗ್‌ಗೂ ಯಾವುದೇ ಸಂಬಂಧವಿಲ್ಲ. ಕೆಲವರು ಒಳ್ಳೆಯ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಕಾಲೇಜು ಆಡಳಿತವು ನೋಟಿಸ್ ಅನ್ನು ಹಿಂತೆಗೆದುಕೊಂಡಿದೆ” ಎಂದರು.

ಕಾಲೇಜಿನ ಸೂಚನೆಯನ್ನು ಟೀಕಿಸಿದ ಡಿಯು ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಪ್ರೊಫೆಸರ್ ಮಾಯಾ ಜಾನ್, “ಎಕ್ಸ್‌ನಲ್ಲಿ ಯಾರನ್ನಾದರೂ ಅನುಸರಿಸುವುದು ಅಥವಾ ಅನುಸರಿಸದಿರುವುದು ಒಬ್ಬರ ಸ್ವಂತ ಆದ್ಯತೆಯನ್ನು ಅವಲಂಬಿಸಿರುತ್ತದೆ. ಅಧಿಕಾರದಲ್ಲಿರುವ ಇನ್ನೊಬ್ಬ ವ್ಯಕ್ತಿ ಅಧಿಕಾರದಲ್ಲಿರುವ ವ್ಯಕ್ತಿಯನ್ನು ಅನುಸರಿಸಲು ನಿರ್ದೇಶನ ನೀಡುವುದು ಕೇವಲ ವಿಚಿತ್ರವಲ್ಲ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಅಧೀನತೆಯ ಸಂಸ್ಕೃತಿಯನ್ನು ಉತ್ತೇಜಿಸುತ್ತದೆ. ಡಿಯು ಕಾಲೇಜು ಪ್ರಾಂಶುಪಾಲರ ಈ ನಿರ್ದೇಶನವು ಅತ್ಯಂತ ಖಂಡನೀಯ” ಎಂದು ನಿರ್ಧಾರವನ್ನು ವಿರೋಧಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಸಿಂಗ್ ಈ ತಿಂಗಳ ಆರಂಭದಲ್ಲಿ ಎಕ್ಸ್‌ಗೆ ಸೇರಿದರು. ಮೇ 8 ರಂದು ತಮ್ಮ ಮೊದಲ ಪೋಸ್ಟ್ ಮಾಡಿದರು.

ಮೇ 12 ರಂದು, ಅವರು ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್ ಮಾಡಿದರು. ಇದನ್ನು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಪಡೆಗಳು ನಡೆಸಿವೆ ಎಂದು ಅವರು ಹೇಳಿದರು.

ಹಿಂದಿಯಲ್ಲಿರುವ ಪೋಸ್ಟ್‌ ಮಾಡಿರುವ ಸಿಂಗ್, “ಭಾರತೀಯ ಪಡೆಗಳು ಪಾಕಿಸ್ತಾನಿ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದವು, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ತಟಸ್ಥಗೊಳಿಸಿದವು, ಇದರಲ್ಲಿ (ವಿಮಾನ) ಐಸಿ-814 ಮತ್ತು ಪುಲ್ವಾಮಾ ಭಯೋತ್ಪಾದಕರು ಸೇರಿದ್ದಾರೆ” ಎಂದು ಹೇಳಿದರು.

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡನೇ ದಲಿತ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...