Homeಮುಖಪುಟಶಹೀನ್ ಬಾಗ್ ಪ್ರತಿಭಟನಾಕಾರರು ಬಡವರು, ಅನಕ್ಷರಸ್ಥರು: ಮತ್ತೇ ವಿವಾದವೆಬ್ಬಿಸಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್...

ಶಹೀನ್ ಬಾಗ್ ಪ್ರತಿಭಟನಾಕಾರರು ಬಡವರು, ಅನಕ್ಷರಸ್ಥರು: ಮತ್ತೇ ವಿವಾದವೆಬ್ಬಿಸಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ “ದೆಹಲಿಯ ಶಾಹೀನ್ ಬಾಗ್ ಮತ್ತು ಕೋಲ್ಕತ್ತಾದ ಪಾರ್ಕ್ ಸರ್ಕಸ್‌ನಲ್ಲಿನ ಪ್ರತಿಭಟನಾಕಾರರು ಬಡವರಾಗಿದ್ದಾರೆ ,ಇವರು ಹಣಕ್ಕಾಗಿ ರಸ್ತೆಯಲ್ಲಿ ಕುಳಿತಿದ್ದಾರೆ” ಎಂದು ಪುನ: ವಿವಾದವೆಬ್ಬಿಸಿದ್ದಾರೆ.

“ದೆಹಲಿಯ ಶಾಹೀನ್ ಬಾಗ್ ಹಾಗೂ ಕೊಲ್ಕತ್ತಾದ ಪಾರ್ಕ್ ಸರ್ಕಸ್ ನಲ್ಲಿನ ಪ್ರತಿಭಟನಾಕಾರರು ಬಡವರು ಮತ್ತು ಅನಕ್ಷರಸ್ಥರಾಗಿದ್ದಾರೆ. ಏನೂ ತಿಳಿಯದ ಬಡ ಜನರನ್ನು ರಸ್ತೆಗಳಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿದೆ. ಅದಕ್ಕೆ ಪ್ರತಿಯಾಗಿ ಅವರು ಪ್ರತಿದಿನ ಹಣವನ್ನು ಪಡೆಯುತ್ತಿದ್ದಾರೆ. ವಿದೇಶಿ ನಿಧಿಯಿಂದ ಖರೀದಿಸಿದ ಬಿರಿಯಾನಿಯನ್ನು ಅವರಿಗೆ ನೀಡಲಾಗುತ್ತಿದೆ. ಜನರು ತಮ್ಮೊಂದಿಗಿದ್ದಾರೆ ಎಂದು ತೋರಿಸಲು ಬೇಕಾಗಿ ಇದನ್ನು ಮಾಡಲಾಗುತ್ತಿದೆ ”ಎಂದು ಕೋಲ್ಕತ್ತಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಘೋಷ್ ಹೇಳಿದ್ದಾರೆ.

“ಅದು ದೆಹಲಿಯ ಶಾಹೀನ್ ಬಾಗ್ ಆಗಿರಲಿ ಅಥವಾ ಕೋಲ್ಕತ್ತಾದ ಪಾರ್ಕ್ ಸರ್ಕಸ್ ಆಗಿರಲಿ, ಚಿತ್ರಣ ಎಲ್ಲೆಡೆಯೂ ಒಂದೇ ಆಗಿರುತ್ತದೆ. ಬೃಂದಾ ಕಾರಟ್ ಮತ್ತು ಪಿ ಚಿದಂಬರಂ ಅವರಂತಹ ಜನರು ದೆಹಲಿ ಅಥವಾ ಕೋಲ್ಕತ್ತಾಗೆ ಹೋದಾಗ ಈ ಸಭೆಗಳಿಗೆ ಹಾಜರಾಗುತ್ತಾರೆ. ಕೆಲವು ಅನಕ್ಷರಸ್ಥ ಮಹಿಳೆಯರು ತಮ್ಮ ತೊಡೆಯ ಮೇಲೆ ಶಿಶುಗಳನ್ನು ಇಟ್ಟುಕೊಂಡಿದ್ದಾರೆ. ಆದರೆ ಅವರು ಕೇವಲ ಪ್ರೇಕ್ಷಕರಷ್ಟೇ” ಎಂದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಮಹಿಳೆಯರು ಡಿಸೆಂಬರ್ 15 ಮತ್ತು ಜನವರಿ 7 ರಿಂದ ಶಾಹೀನ್ ಬಾಗ್ ಮತ್ತು ಪಾರ್ಕ್ ಸರ್ಕಸ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಶಾಹೀನ್ ಬಾಗ್ ಪ್ರತಿಭಟನೆಯೂ ಪಾರ್ಕ್ ಸರ್ಕಸ್ ಸೇರಿದಂತೆ ದೇಶಾದ್ಯಂತ ಅನೇಕ ಧರಣಿಗಳಿಗೆ ಪ್ರೇರಣೆ ನೀಡಿದೆ.

ಘೋಷ್ ಈ ಹಿಂದೆ “ಶಹೀನ್ ಬಾಗ್ ಪ್ರತಿಭಟನಾಕಾರರಿಗೆ ಯಾರು ಹಣ ನೀಡುತ್ತಿದ್ದಾರೆ ಮತ್ತು ದೆಹಲಿಯ ಶೀತದಲ್ಲಿ ಕುಳಿತಿದ್ದರೂ ಅವರಲ್ಲಿ ಯಾರೂ ಸತ್ತಿಲ್ಲ, ಹೇಗೆ ?” ಎಂಬ ಹೇಳಿಕೆ ನೀಡಿದ್ದರು.

ಮೇದಿನಿಪುರದ ಬಿಜೆಪಿ ಸಂಸದರಾದ ಘೋಷ್ ಮೇಲೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...