Homeಮುಖಪುಟ"ಶಾಹೀನ್ ಬಾಗ್" ಆಮ್ ಆದ್ಮಿ ಪಕ್ಷದ ಸಾಲವನ್ನು ತೀರಿಸುತ್ತಿದೆ..!!

“ಶಾಹೀನ್ ಬಾಗ್” ಆಮ್ ಆದ್ಮಿ ಪಕ್ಷದ ಸಾಲವನ್ನು ತೀರಿಸುತ್ತಿದೆ..!!

ಮತ್ತೇ ವಿವಾದವೆಬ್ಬಿಸಿದ ಬಿಜೆಪಿ ಸಂಸದ ಪರ್ವೇಶ್ ವರ್ಮ

- Advertisement -
- Advertisement -

ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಹೆಸರುವಾಸಿಯಾದ ಬಿಜೆಪಿ ಸಂಸದ ಪರ್ವೇಶ್ ವರ್ಮಾ ದೆಹಲಿ ಮತದಾನ ದಿನವಾದ ಇಂದು ವಿಡಿಯೋವೊಂದನ್ನು ಹರಿಯಬಿಟ್ಟು ಮತ್ತೆ ವಿವಾದವೆಬ್ಬಿಸಿದ್ದಾರೆ. ಅವರು ಶಾಹೀನ್ ಬಾಗ್ ನಲ್ಲಿ ಜನರು ಸಾಲುಗಟ್ಟಿ ಆಮ್ ಆದ್ಮಿ ಪಕ್ಷಕ್ಕೆ ಮತ ಚಲಾಯಿಸುತ್ತಿದ್ದಾರೆ, ಯಾಕೆಂದರೆ ಅದು ಆಮ್ ಆದ್ಮಿ ಪಕ್ಷದ ಸಾಲವನ್ನು ತೀರಿಸುತ್ತಿದೆ..!! ಎಂದು ಹೇಳುವ ವೀಡಿಯೊವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ದೆಹಲಿಯ ಜನರು, ಮಾಧ್ಯಮಗಳು ನಾನು ಇಲ್ಲಿಯವರೆಗೆ ಹೇಳುತ್ತಿದ್ದ ಮಾತನ್ನು ಹೇಳುತ್ತಿವೆ. ಶಾಹೀನ್ ಬಾಗ್, ಸೀಲಾಂಪುರ್ ಮತ್ತು ಜಾಮಿಯಾ ಮಿಲ್ಲಿಯಾದ ನಿರ್ದಿಷ್ಟ ಸಮುದಾಯದ ಜನರು ಉದ್ದದ ಸಾಲುಗಳಲ್ಲಿ ನಿಂತು ಎಎಪಿಗೆ ಮತ ಹಾಕುತ್ತೇವೆ ಎಂದು ಹೇಳುತ್ತಿದಾರೆ. ಯಾಕೆಂದರೆ ಆದ್ಮಿ ಪಕ್ಷವು ಒಂದು ತಿಂಗಳಿಗೂ ಹೆಚ್ಚು ಕಾಲ ಅವರಿಗೆ ಬಿರಿಯಾನಿ ನೀಡುತ್ತಿದೆ” ಎಂದು ವರ್ಮಾ ಹೇಳಿದ್ದಾರೆ.

ಪರ್ವೇಶ್ ವರ್ಮ ಇದನ್ನು ಎಎಪಿ ನೀಡಿದ “ಸಾಲದ ಮರುಪಾವತಿ” ವಿಧಾನ ಎಂದೂ ಹೇಳಿದರು. ದೆಹಲಿಯ ಜನರನ್ನು “ರಾಷ್ಟ್ರವಾದಿ” ಮತ್ತು “ದೇಶಭಕ್ತ” ಎಂದು ಸಂಬೋಧಿಸಿದ ವರ್ಮಾ “ನಾವು ದೆಹಲಿಯನ್ನು ಬೇರ್ಪಡಿಸಲು ಬಿಡುವುದಿಲ್ಲ, ಇದಕ್ಕಾಗಿ ನೀವೂ ದೊಡ್ಡ ದೊಡ್ಡ ಸಾಲುಗಳಲ್ಲಿ ನಿಂತು ನಾವು ರಾಷ್ಟ್ರಭಕ್ತ ಪಕ್ಷಕ್ಕೆ ಮತ ನೀಡುತ್ತೇವೆ ಎಂದು ಹೇಳಿ ಎಂದ ಅವರು ಜೋರಾಗಿ ಜೈ ಶ್ರೀ ರಾಮ್ ಹೇಳಿ” ಎಂದಿದ್ದಾರೆ.

ಮತದಾನದ ದಿನದಂದು ವರ್ಮಾ, ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದು ವಿರೋಧ ಪಕ್ಷದವರಲ್ಲಿ ಕಳವಳವನ್ನು ಸೃಷ್ಟಿಸಿದೆ. ಇದಕ್ಕೆ ಚುನಾವಣಾ ಆಯೋಗ ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಮತದಾನ ದಿನದಂದು ಇದನ್ನು ಹರಿಯಬಿಟ್ಟಿದ್ದರಿಂದ ಮತದಾರರ ಧ್ರುವೀಕರಿಸುವ ಸಾಧ್ಯತೆಯೂ ಇದೆ.

ಶಾಹೀನ್ ಬಾಗ್ ಪ್ರತಿಭಟನಾಕಾರರಿಗೆ ಎಎಪಿ ಬಿರಿಯಾನಿ ವ್ಯವಸ್ಥೆ ಮಾಡುತ್ತಿದೆ ಎಂದು ವರ್ಮಾ ಆರೋಪಿಸುತ್ತಿರುವುದು ಇದೇ ಮೊದಲಲ್ಲ.

ಮುಂಚೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎರಡು ಬಾರಿ ಪ್ರಚಾರ ಮಾಡುವುದನ್ನು ನಿಷೇಧಿಸಿತು.

ಇಂದು ದೆಹಲಿ ಮತದಾನ ನಡೆಯುತ್ತಿದ್ದು, ಫೆಬ್ರವರಿ 11 ರಂದು ಫಲಿತಾಂಶಗಳು ಹೊರಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...