Homeಮುಖಪುಟ"ಶಾಹೀನ್ ಬಾಗ್" ಆಮ್ ಆದ್ಮಿ ಪಕ್ಷದ ಸಾಲವನ್ನು ತೀರಿಸುತ್ತಿದೆ..!!

“ಶಾಹೀನ್ ಬಾಗ್” ಆಮ್ ಆದ್ಮಿ ಪಕ್ಷದ ಸಾಲವನ್ನು ತೀರಿಸುತ್ತಿದೆ..!!

ಮತ್ತೇ ವಿವಾದವೆಬ್ಬಿಸಿದ ಬಿಜೆಪಿ ಸಂಸದ ಪರ್ವೇಶ್ ವರ್ಮ

- Advertisement -
- Advertisement -

ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಹೆಸರುವಾಸಿಯಾದ ಬಿಜೆಪಿ ಸಂಸದ ಪರ್ವೇಶ್ ವರ್ಮಾ ದೆಹಲಿ ಮತದಾನ ದಿನವಾದ ಇಂದು ವಿಡಿಯೋವೊಂದನ್ನು ಹರಿಯಬಿಟ್ಟು ಮತ್ತೆ ವಿವಾದವೆಬ್ಬಿಸಿದ್ದಾರೆ. ಅವರು ಶಾಹೀನ್ ಬಾಗ್ ನಲ್ಲಿ ಜನರು ಸಾಲುಗಟ್ಟಿ ಆಮ್ ಆದ್ಮಿ ಪಕ್ಷಕ್ಕೆ ಮತ ಚಲಾಯಿಸುತ್ತಿದ್ದಾರೆ, ಯಾಕೆಂದರೆ ಅದು ಆಮ್ ಆದ್ಮಿ ಪಕ್ಷದ ಸಾಲವನ್ನು ತೀರಿಸುತ್ತಿದೆ..!! ಎಂದು ಹೇಳುವ ವೀಡಿಯೊವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ದೆಹಲಿಯ ಜನರು, ಮಾಧ್ಯಮಗಳು ನಾನು ಇಲ್ಲಿಯವರೆಗೆ ಹೇಳುತ್ತಿದ್ದ ಮಾತನ್ನು ಹೇಳುತ್ತಿವೆ. ಶಾಹೀನ್ ಬಾಗ್, ಸೀಲಾಂಪುರ್ ಮತ್ತು ಜಾಮಿಯಾ ಮಿಲ್ಲಿಯಾದ ನಿರ್ದಿಷ್ಟ ಸಮುದಾಯದ ಜನರು ಉದ್ದದ ಸಾಲುಗಳಲ್ಲಿ ನಿಂತು ಎಎಪಿಗೆ ಮತ ಹಾಕುತ್ತೇವೆ ಎಂದು ಹೇಳುತ್ತಿದಾರೆ. ಯಾಕೆಂದರೆ ಆದ್ಮಿ ಪಕ್ಷವು ಒಂದು ತಿಂಗಳಿಗೂ ಹೆಚ್ಚು ಕಾಲ ಅವರಿಗೆ ಬಿರಿಯಾನಿ ನೀಡುತ್ತಿದೆ” ಎಂದು ವರ್ಮಾ ಹೇಳಿದ್ದಾರೆ.

ಪರ್ವೇಶ್ ವರ್ಮ ಇದನ್ನು ಎಎಪಿ ನೀಡಿದ “ಸಾಲದ ಮರುಪಾವತಿ” ವಿಧಾನ ಎಂದೂ ಹೇಳಿದರು. ದೆಹಲಿಯ ಜನರನ್ನು “ರಾಷ್ಟ್ರವಾದಿ” ಮತ್ತು “ದೇಶಭಕ್ತ” ಎಂದು ಸಂಬೋಧಿಸಿದ ವರ್ಮಾ “ನಾವು ದೆಹಲಿಯನ್ನು ಬೇರ್ಪಡಿಸಲು ಬಿಡುವುದಿಲ್ಲ, ಇದಕ್ಕಾಗಿ ನೀವೂ ದೊಡ್ಡ ದೊಡ್ಡ ಸಾಲುಗಳಲ್ಲಿ ನಿಂತು ನಾವು ರಾಷ್ಟ್ರಭಕ್ತ ಪಕ್ಷಕ್ಕೆ ಮತ ನೀಡುತ್ತೇವೆ ಎಂದು ಹೇಳಿ ಎಂದ ಅವರು ಜೋರಾಗಿ ಜೈ ಶ್ರೀ ರಾಮ್ ಹೇಳಿ” ಎಂದಿದ್ದಾರೆ.

ಮತದಾನದ ದಿನದಂದು ವರ್ಮಾ, ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದು ವಿರೋಧ ಪಕ್ಷದವರಲ್ಲಿ ಕಳವಳವನ್ನು ಸೃಷ್ಟಿಸಿದೆ. ಇದಕ್ಕೆ ಚುನಾವಣಾ ಆಯೋಗ ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಮತದಾನ ದಿನದಂದು ಇದನ್ನು ಹರಿಯಬಿಟ್ಟಿದ್ದರಿಂದ ಮತದಾರರ ಧ್ರುವೀಕರಿಸುವ ಸಾಧ್ಯತೆಯೂ ಇದೆ.

ಶಾಹೀನ್ ಬಾಗ್ ಪ್ರತಿಭಟನಾಕಾರರಿಗೆ ಎಎಪಿ ಬಿರಿಯಾನಿ ವ್ಯವಸ್ಥೆ ಮಾಡುತ್ತಿದೆ ಎಂದು ವರ್ಮಾ ಆರೋಪಿಸುತ್ತಿರುವುದು ಇದೇ ಮೊದಲಲ್ಲ.

ಮುಂಚೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎರಡು ಬಾರಿ ಪ್ರಚಾರ ಮಾಡುವುದನ್ನು ನಿಷೇಧಿಸಿತು.

ಇಂದು ದೆಹಲಿ ಮತದಾನ ನಡೆಯುತ್ತಿದ್ದು, ಫೆಬ್ರವರಿ 11 ರಂದು ಫಲಿತಾಂಶಗಳು ಹೊರಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...