Homeಮುಖಪುಟವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ- ವಿದ್ಯಾರ್ಥಿಗಳು

- Advertisement -
- Advertisement -

ಬೀದರ್ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಮತ್ತೊಮ್ಮೆ ಮುನ್ನೆಲೆಯ ಚರ್ಚೆಯಲ್ಲಿದೆ. ಶಾಹೀನ್ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ ನೀಟ್‌ನಲ್ಲಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್‍ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದರು.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಟಾಪರ್‌ಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಸಂಸ್ಥೆಯಲ್ಲಿ ಜಾತ್ಯತೀತ, ಧರ್ಮಾತೀತ ವಾತಾವರಣ ಇದೆ ಎಂದು ನೀಟ್ ಟಾಪರ್‌ ಕಾರ್ತಿಕ್ ರೆಡ್ಡಿ ಅಭಿಪ್ರಾಯಪಟ್ಟರು.

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ಸಾಧನೆ ಕುರಿತು ಪ್ರತಿಕ್ರಿಯಿಸಿದ ಅವರು, ಲಾಕ್‍ಡೌನ್ ಅವಧಿ ನನಗೆ ಅವಕಾಶವಾಗಿ ಪರಿಣಮಿಸಿತು. ಈ ಅವಧಿಯಲ್ಲಿ ನಿತ್ಯ 10-12 ಗಂಟೆಗಳು ಅಭ್ಯಾಸ ಮಾಡುತ್ತಿದೆ ಎಂದಿದ್ದಾರೆ. ನನ್ನ ಓದಿಗೆ ಶಾಹೀನ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನ ತುಂಬಾ ಸಹಾಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಇನ್ನು ಶಾಹೀನ್ ಶಿಕ್ಷಣ ಸಂಸ್ಥೆಯ ನೆರವಿನಿಂದ ವೈದ್ಯಕೀಯ ಸೀಟು ಪಡೆದ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಕುತೆಸ್ರಾ ಗ್ರಾಮದ ಮಹಮ್ಮದ್ ಅನಸ್ ಆರನೇ ಪ್ರಯತ್ನದಲ್ಲಿ ಪ್ರಸಕ್ತ ಸಾಲಿನ ನೀಟ್‍ನಲ್ಲಿ 663 ಅಂಕ (1,876ನೇ ರ್‍ಯಾಂಕ್) ಗಳಿಸಿ ಗಮನ ಸೆಳೆದಿದ್ದಾರೆ.

ರೈತರಾಗಿರುವ ಮಹಮ್ಮದ್ ಕಾಮಿಲ್ ಅವರ ನಾಲ್ಕನೆಯ ಪುತ್ರ ಮಹಮ್ಮದ್ ಅನಸ್, ಕುಟುಂಬದಲ್ಲೇ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಪಡೆಯಲಿರುವವರಲ್ಲಿ ಮೊದಲಿಗರಾಗಿದ್ದಾರೆ. ಉತ್ತರಪ್ರದೇಶದ ವಿದ್ಯಾರ್ಥಿಯೊಬ್ಬರಿಂದ ಮಾಹಿತಿ ಪಡೆದು ನೀಟ್ ತರಬೇತಿಗಾಗಿ ಬೀದರ್‌ನ ಶಾಹೀನ್ ಕಾಲೇಜಿಗೆ ಬಂದೆ. ಇದೆಲ್ಲಾ ಸಾಧ್ಯವಾಗಿದ್ದು ಶಾಹೀನ್‌ನಿಂದ ಎಂದು ಹೆಮ್ಮೆಯಿಂದ ತಿಳಿಸುತ್ತಾರೆ.

ಶಾಹೀನ್‌ ಶಿಕ್ಷಣ ಸಂಸ್ಥೆಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸಲು ಸರ್ವ ಪ್ರಯತ್ನ ನಡೆಸುತ್ತಿದೆ. ಪ್ರಸಕ್ತ ಸಾಲಿನ ನೀಟ್‌ ದೀರ್ಘ ಕಾಲದ ರಿಪೀಟರ್‌ ತರಬೇತಿ ಹಾಗೂ ಇತರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರೂಪಾಯಿ ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ದೇಶದ ಸಂಸ್ಥೆಯ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...