Homeಮುಖಪುಟವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ- ವಿದ್ಯಾರ್ಥಿಗಳು

- Advertisement -
- Advertisement -

ಬೀದರ್ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಮತ್ತೊಮ್ಮೆ ಮುನ್ನೆಲೆಯ ಚರ್ಚೆಯಲ್ಲಿದೆ. ಶಾಹೀನ್ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ ನೀಟ್‌ನಲ್ಲಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್‍ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದರು.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಟಾಪರ್‌ಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಸಂಸ್ಥೆಯಲ್ಲಿ ಜಾತ್ಯತೀತ, ಧರ್ಮಾತೀತ ವಾತಾವರಣ ಇದೆ ಎಂದು ನೀಟ್ ಟಾಪರ್‌ ಕಾರ್ತಿಕ್ ರೆಡ್ಡಿ ಅಭಿಪ್ರಾಯಪಟ್ಟರು.

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ಸಾಧನೆ ಕುರಿತು ಪ್ರತಿಕ್ರಿಯಿಸಿದ ಅವರು, ಲಾಕ್‍ಡೌನ್ ಅವಧಿ ನನಗೆ ಅವಕಾಶವಾಗಿ ಪರಿಣಮಿಸಿತು. ಈ ಅವಧಿಯಲ್ಲಿ ನಿತ್ಯ 10-12 ಗಂಟೆಗಳು ಅಭ್ಯಾಸ ಮಾಡುತ್ತಿದೆ ಎಂದಿದ್ದಾರೆ. ನನ್ನ ಓದಿಗೆ ಶಾಹೀನ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನ ತುಂಬಾ ಸಹಾಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಇನ್ನು ಶಾಹೀನ್ ಶಿಕ್ಷಣ ಸಂಸ್ಥೆಯ ನೆರವಿನಿಂದ ವೈದ್ಯಕೀಯ ಸೀಟು ಪಡೆದ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಕುತೆಸ್ರಾ ಗ್ರಾಮದ ಮಹಮ್ಮದ್ ಅನಸ್ ಆರನೇ ಪ್ರಯತ್ನದಲ್ಲಿ ಪ್ರಸಕ್ತ ಸಾಲಿನ ನೀಟ್‍ನಲ್ಲಿ 663 ಅಂಕ (1,876ನೇ ರ್‍ಯಾಂಕ್) ಗಳಿಸಿ ಗಮನ ಸೆಳೆದಿದ್ದಾರೆ.

ರೈತರಾಗಿರುವ ಮಹಮ್ಮದ್ ಕಾಮಿಲ್ ಅವರ ನಾಲ್ಕನೆಯ ಪುತ್ರ ಮಹಮ್ಮದ್ ಅನಸ್, ಕುಟುಂಬದಲ್ಲೇ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಪಡೆಯಲಿರುವವರಲ್ಲಿ ಮೊದಲಿಗರಾಗಿದ್ದಾರೆ. ಉತ್ತರಪ್ರದೇಶದ ವಿದ್ಯಾರ್ಥಿಯೊಬ್ಬರಿಂದ ಮಾಹಿತಿ ಪಡೆದು ನೀಟ್ ತರಬೇತಿಗಾಗಿ ಬೀದರ್‌ನ ಶಾಹೀನ್ ಕಾಲೇಜಿಗೆ ಬಂದೆ. ಇದೆಲ್ಲಾ ಸಾಧ್ಯವಾಗಿದ್ದು ಶಾಹೀನ್‌ನಿಂದ ಎಂದು ಹೆಮ್ಮೆಯಿಂದ ತಿಳಿಸುತ್ತಾರೆ.

ಶಾಹೀನ್‌ ಶಿಕ್ಷಣ ಸಂಸ್ಥೆಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸಲು ಸರ್ವ ಪ್ರಯತ್ನ ನಡೆಸುತ್ತಿದೆ. ಪ್ರಸಕ್ತ ಸಾಲಿನ ನೀಟ್‌ ದೀರ್ಘ ಕಾಲದ ರಿಪೀಟರ್‌ ತರಬೇತಿ ಹಾಗೂ ಇತರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರೂಪಾಯಿ ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ದೇಶದ ಸಂಸ್ಥೆಯ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...