Homeಮುಖಪುಟವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ- ವಿದ್ಯಾರ್ಥಿಗಳು

- Advertisement -
- Advertisement -

ಬೀದರ್ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಮತ್ತೊಮ್ಮೆ ಮುನ್ನೆಲೆಯ ಚರ್ಚೆಯಲ್ಲಿದೆ. ಶಾಹೀನ್ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ ನೀಟ್‌ನಲ್ಲಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್‍ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದರು.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಟಾಪರ್‌ಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಸಂಸ್ಥೆಯಲ್ಲಿ ಜಾತ್ಯತೀತ, ಧರ್ಮಾತೀತ ವಾತಾವರಣ ಇದೆ ಎಂದು ನೀಟ್ ಟಾಪರ್‌ ಕಾರ್ತಿಕ್ ರೆಡ್ಡಿ ಅಭಿಪ್ರಾಯಪಟ್ಟರು.

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ಸಾಧನೆ ಕುರಿತು ಪ್ರತಿಕ್ರಿಯಿಸಿದ ಅವರು, ಲಾಕ್‍ಡೌನ್ ಅವಧಿ ನನಗೆ ಅವಕಾಶವಾಗಿ ಪರಿಣಮಿಸಿತು. ಈ ಅವಧಿಯಲ್ಲಿ ನಿತ್ಯ 10-12 ಗಂಟೆಗಳು ಅಭ್ಯಾಸ ಮಾಡುತ್ತಿದೆ ಎಂದಿದ್ದಾರೆ. ನನ್ನ ಓದಿಗೆ ಶಾಹೀನ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನ ತುಂಬಾ ಸಹಾಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಇನ್ನು ಶಾಹೀನ್ ಶಿಕ್ಷಣ ಸಂಸ್ಥೆಯ ನೆರವಿನಿಂದ ವೈದ್ಯಕೀಯ ಸೀಟು ಪಡೆದ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಕುತೆಸ್ರಾ ಗ್ರಾಮದ ಮಹಮ್ಮದ್ ಅನಸ್ ಆರನೇ ಪ್ರಯತ್ನದಲ್ಲಿ ಪ್ರಸಕ್ತ ಸಾಲಿನ ನೀಟ್‍ನಲ್ಲಿ 663 ಅಂಕ (1,876ನೇ ರ್‍ಯಾಂಕ್) ಗಳಿಸಿ ಗಮನ ಸೆಳೆದಿದ್ದಾರೆ.

ರೈತರಾಗಿರುವ ಮಹಮ್ಮದ್ ಕಾಮಿಲ್ ಅವರ ನಾಲ್ಕನೆಯ ಪುತ್ರ ಮಹಮ್ಮದ್ ಅನಸ್, ಕುಟುಂಬದಲ್ಲೇ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಪಡೆಯಲಿರುವವರಲ್ಲಿ ಮೊದಲಿಗರಾಗಿದ್ದಾರೆ. ಉತ್ತರಪ್ರದೇಶದ ವಿದ್ಯಾರ್ಥಿಯೊಬ್ಬರಿಂದ ಮಾಹಿತಿ ಪಡೆದು ನೀಟ್ ತರಬೇತಿಗಾಗಿ ಬೀದರ್‌ನ ಶಾಹೀನ್ ಕಾಲೇಜಿಗೆ ಬಂದೆ. ಇದೆಲ್ಲಾ ಸಾಧ್ಯವಾಗಿದ್ದು ಶಾಹೀನ್‌ನಿಂದ ಎಂದು ಹೆಮ್ಮೆಯಿಂದ ತಿಳಿಸುತ್ತಾರೆ.

ಶಾಹೀನ್‌ ಶಿಕ್ಷಣ ಸಂಸ್ಥೆಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸಲು ಸರ್ವ ಪ್ರಯತ್ನ ನಡೆಸುತ್ತಿದೆ. ಪ್ರಸಕ್ತ ಸಾಲಿನ ನೀಟ್‌ ದೀರ್ಘ ಕಾಲದ ರಿಪೀಟರ್‌ ತರಬೇತಿ ಹಾಗೂ ಇತರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರೂಪಾಯಿ ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ದೇಶದ ಸಂಸ್ಥೆಯ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...