Homeಮುಖಪುಟಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ಈ ಕಂಪನಿ ತಾಕೀತು ಮಾಡಿದೆ.

- Advertisement -
- Advertisement -

ಸಿದ್ಧ ಉಡುಪು ತಯಾರಿಕಾ (ಗಾರ್ಮೆಂಟ್ಸ್) ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು ಸರಕಾರದ ಆದೇಶವನ್ನೇ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್ ಆರೋಪಿಸಿದೆ.

ರಾಜ್ಯ ಸರ್ಕಾರವು ಸಾಂಕ್ರಾಮಿಕ ಕಾಯಿಲೆ ಕೊರೊನಾ ತಡೆಯುವ ಉದ್ದೇಶದಿಂದ ದಿನಾಂಕ 23.03.2020 ರಂದು ಆದೇಶ ಹೊರಡಿಸಿ ರಾಜ್ಯಾದ್ಯಂತ ಇರುವ ಎಲ್ಲಾ ಕಾರ್ಖಾನೆಗಳಿಗೆ 31.03.2020 ರವರೆಗೆ ಸಂಬಳ ಸಹಿತ ರಜೆ ಘೋಷಿಸಿದೆ. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನವನ್ನು ಕಡಿತಗೊಳಿಸಬಾರದೆಂದು ಮತ್ತು ಕಾರ್ಮಿಕರನ್ನು ಯಾವುದೇ ಕಾರಣಕ್ಕೆ ಕೆಲಸದಿಂದ ವಜಾ ಮಾಡಬಾರದೆಂದೂ ಆದೇಶಿಸಿದೆ.

ಆದರೆ ಸರಕಾರದ ಆದೇಶವನ್ನು ಕಡೆಗಣಿಸಿ, ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು, ಸ್ವಾರ್ಥ, ಸರ್ವಾಧಿಕಾರಿ ಧೋರಣೆಯನ್ನು ಮುಂದುವರಿಸಿ ದಿನಾಂಕ 28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ತಾಕೀತು ಮಾಡಿದೆ.

ಈ ಮೊದಲು ಇದೇ ಕಂಪನಿಯು ಮಾರ್ಚ್‌ 19ರಂದು ಮಂಡ್ಯದ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ರಜೆ ಘೋಷಿಸಿದ್ದನ್ನು ವಿರೋಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹಿಂಪಡೆಯುವಂತೆ ಒತ್ತಾಯಿಸಿತ್ತು.

ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗದ ಈ ನಡೆ, ಕಾರ್ಮಿಕರ ಆರೋಗ್ಯದ ಬಗೆಗಿನ ನಿಷ್ಕಾಳಜಿ, ಬೇಜವಾಬ್ದಾರಿತನ ಮತ್ತು ಅತಿ ಲಾಭದ ದುರಾಸೆಯನ್ನಷ್ಟೇ ತೋರಿಸುತ್ತದೆ.

ಕಾರ್ಮಿಕರ ಹಿತ ಕಾಪಾಡಬೇಕಾದ ಸದರಿ ಕಂಪನಿಗೆ ತನ್ನ ಲಾಭವೇ ಮುಖ್ಯ ಆಗಿದೆಯೇ ಹೊರತು ಕಾರ್ಮಿಕರ ಆರೋಗ್ಯ ಮತ್ತು ಜೀವದ ಬಗ್ಗೆ ಕಿಂಚಿತ್ತು ಗೌರವ ಇಲ್ಲದಿರುವುದನ್ನು ಸೂಚಿಸುತ್ತದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮುರವರು ಕಿಡಿಕಾರಿದ್ದಾರೆ.

ಸರಕಾರದ ಆದೇಶವನ್ನೇ ಧಿಕ್ಕರಿಸಿ, ಬಡ ಕಾರ್ಮಿಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ವಿರುದ್ಧ ಸಂಬಂಧಪಟ್ಟವರು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಕಾರ್ಮಿಕರ ಹಿತ ಕಾಪಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

    • Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...