Homeಮುಖಪುಟಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ಈ ಕಂಪನಿ ತಾಕೀತು ಮಾಡಿದೆ.

- Advertisement -
- Advertisement -

ಸಿದ್ಧ ಉಡುಪು ತಯಾರಿಕಾ (ಗಾರ್ಮೆಂಟ್ಸ್) ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು ಸರಕಾರದ ಆದೇಶವನ್ನೇ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್ ಆರೋಪಿಸಿದೆ.

ರಾಜ್ಯ ಸರ್ಕಾರವು ಸಾಂಕ್ರಾಮಿಕ ಕಾಯಿಲೆ ಕೊರೊನಾ ತಡೆಯುವ ಉದ್ದೇಶದಿಂದ ದಿನಾಂಕ 23.03.2020 ರಂದು ಆದೇಶ ಹೊರಡಿಸಿ ರಾಜ್ಯಾದ್ಯಂತ ಇರುವ ಎಲ್ಲಾ ಕಾರ್ಖಾನೆಗಳಿಗೆ 31.03.2020 ರವರೆಗೆ ಸಂಬಳ ಸಹಿತ ರಜೆ ಘೋಷಿಸಿದೆ. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನವನ್ನು ಕಡಿತಗೊಳಿಸಬಾರದೆಂದು ಮತ್ತು ಕಾರ್ಮಿಕರನ್ನು ಯಾವುದೇ ಕಾರಣಕ್ಕೆ ಕೆಲಸದಿಂದ ವಜಾ ಮಾಡಬಾರದೆಂದೂ ಆದೇಶಿಸಿದೆ.

ಆದರೆ ಸರಕಾರದ ಆದೇಶವನ್ನು ಕಡೆಗಣಿಸಿ, ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು, ಸ್ವಾರ್ಥ, ಸರ್ವಾಧಿಕಾರಿ ಧೋರಣೆಯನ್ನು ಮುಂದುವರಿಸಿ ದಿನಾಂಕ 28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ತಾಕೀತು ಮಾಡಿದೆ.

ಈ ಮೊದಲು ಇದೇ ಕಂಪನಿಯು ಮಾರ್ಚ್‌ 19ರಂದು ಮಂಡ್ಯದ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ರಜೆ ಘೋಷಿಸಿದ್ದನ್ನು ವಿರೋಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹಿಂಪಡೆಯುವಂತೆ ಒತ್ತಾಯಿಸಿತ್ತು.

ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗದ ಈ ನಡೆ, ಕಾರ್ಮಿಕರ ಆರೋಗ್ಯದ ಬಗೆಗಿನ ನಿಷ್ಕಾಳಜಿ, ಬೇಜವಾಬ್ದಾರಿತನ ಮತ್ತು ಅತಿ ಲಾಭದ ದುರಾಸೆಯನ್ನಷ್ಟೇ ತೋರಿಸುತ್ತದೆ.

ಕಾರ್ಮಿಕರ ಹಿತ ಕಾಪಾಡಬೇಕಾದ ಸದರಿ ಕಂಪನಿಗೆ ತನ್ನ ಲಾಭವೇ ಮುಖ್ಯ ಆಗಿದೆಯೇ ಹೊರತು ಕಾರ್ಮಿಕರ ಆರೋಗ್ಯ ಮತ್ತು ಜೀವದ ಬಗ್ಗೆ ಕಿಂಚಿತ್ತು ಗೌರವ ಇಲ್ಲದಿರುವುದನ್ನು ಸೂಚಿಸುತ್ತದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮುರವರು ಕಿಡಿಕಾರಿದ್ದಾರೆ.

ಸರಕಾರದ ಆದೇಶವನ್ನೇ ಧಿಕ್ಕರಿಸಿ, ಬಡ ಕಾರ್ಮಿಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ವಿರುದ್ಧ ಸಂಬಂಧಪಟ್ಟವರು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಕಾರ್ಮಿಕರ ಹಿತ ಕಾಪಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

    • Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...