Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...