Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...