Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...