Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...