Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...