Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...