Homeಚಳವಳಿ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ- ಬಿಲ್ಕೀಸ್

- Advertisement -
- Advertisement -

ಸಿಎಎ ಪ್ರತಿಭಟನೆಯಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌, ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ದೇಶದಾದ್ಯಂತ ಸಿಎಎ ವಿರುದ್ದ ನಡೆಯುತ್ತಿದ್ದ ಪ್ರತಿಭಟನೆಯ ಕೇಂದ್ರ ಬಿಂದು ಆಗಿದ್ದ ಶಾಹಿನ್ ಬಾಗ್‌ನಲ್ಲಿ, ದೆಹಲಿಯ ಚಳಿಗೂ ಜಗ್ಗದೆ ಕೋಟ್ಯಾಂತರ ಚಳವಳಿಗಾರರ ಸ್ಫೂರ್ತಿಯ, ಪ್ರತಿರೋಧದ ಮುಖವಾಗಿ ಅವರು ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಟೈಮ್ಸ್‌‌ನಲ್ಲಿ ಅವರ ಬಗ್ಗೆ ಬರೆದಿರುವ ಖ್ಯಾತ ಪತ್ರಕರ್ತೆ, “ನಾನು ಅವರ ಬಗ್ಗೆ ಬರೆಯಿತ್ತಿರುವುದಕ್ಕೆ ಹೆಮ್ಮೆ ಪಡುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

PC: Anil Sharma—Alamy

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಟೈಮ್ ನಿಯತಕಾಲಿಕೆಯ ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ ಆಯುಷ್ಮಾನ್ ಖುರಾನಾ, ಗೂಗಲ್ ಕಾರ್ಯನಿರ್ವಾಹಕ ಸುಂದರ್ ಪಿಚ್ಚೈ ಮುಂತಾದವರು ಸ್ಥಾನ ಪಡೆದಿದ್ದಾರೆ.


ಇದನ್ನೂ ಓದಿ: BJP ಕಾರ್ಯಕರ್ತನ ಅಂಗಡಿಯಲ್ಲಿ ಮಾಡಿದ ವಿಡಿಯೋವನ್ನು ಶಾಹೀನ್‌ ಬಾಗ್‌ ಸ್ಟಿಂಗ್‌ ಎಂದು ಸುಳ್ಳು ಹೇಳಿದ BJP ಐಟಿ ಸೆಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...