Homeಚಳವಳಿಅಂಬೇಡ್ಕರ್ ಪಟ - ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು. ಅಲ್ಲಿಂದ ಅದು ಒಂದೂವರೆ ಲಕ್ಷಕ್ಕೆ ಏರಿದೆ...

- Advertisement -
- Advertisement -

ರಾಮ್ ರಾಮ್, ಅಲ್ಲಾ ಹೋ ಅಕ್ಬರ್, ವಾಹೇ ಗುರೂ… ಹಿಂದು-ಮುಸ್ಲಿಮ್-ಸಿಖ್- ಕ್ರೈಸ್ತ ಧಾರ್ಮಿಕ ಜಯಕಾರಗಳು, ಜನಗಣಮನ… ಒಂದೇ ಚಪ್ಪರದಡಿ ಕುಳಿತ ಜನಸಮೂಹದಿಂದ ಮೊಳಗುತ್ತವೆ… ಪುರೋಹಿತರು ಹವನ ನೆರವೇರಿಸಿದರೆ ಮುಸಲ್ಮಾನರು ಭಕ್ತಿಯಿಂದ ಕೈ ಮುಗಿದು ಕುಳಿತಿರುತ್ತಾರೆ… ಖುರಾನ್, ಗೀತೆ, ಬೈಬಲ್ ಹಾಗೂ ಗುರು ಗ್ರಂಥಸಾಹೇಬದ ಪಠಣ ಅಕ್ಕಪಕ್ಕದಲ್ಲಿ ಜರುಗುತ್ತದೆ.. ದೇಶಭಕ್ತಿಯ ಘೋಷಣೆಗಳು, ಸಂವಿಧಾನದ ಮುನ್ನುಡಿಯ ವಾಚನ.. ಪ್ರತಿಭಟನೆಯ ಕವಿತೆಗಳು, ಚರ್ಚೆಗಳು, ಭಾಷಣಗಳು.. ಅಂಬೇಡ್ಕರ್- ಗಾಂಧೀ ಚಿತ್ರಪಟಗಳು, ಮೇಣದ ಬತ್ತಿ ಮೆರವಣಿಗೆಗಳು, ತಲೆಗಳಿಗೆ ಸುತ್ತಿಕೊಂಡ ತ್ರಿವರ್ಣ ಧ್ವಜಗಳು.. ಕತ್ತಲಲ್ಲಿ ತಾರೆಗಳಂತೆ ಒಮ್ಮೆಲೆ ಮಿನುಗುವ ಸಾವಿರಾರು ಮೊಬೈಲ್ ಫೋನುಗಳ ಬೆಳಕು… ದೆಹಲಿಯ ಶಾಹೀನ್ ಬಾಗ್ ನಲ್ಲಿ ನಿತ್ಯ ರಾತ್ರಿ ಕಾಣಬರುತ್ತಿರುವ ಮನತುಂಬುವ ಈ ನೋಟಗಳಿಗೆ, ಕಿವಿ ತುಂಬುವ ದನಿಗಳಿಗೆ ತಿಂಗಳು ತುಂಬಿದೆ.

ಎನ್.ಆರ್.ಸಿ-ಸಿಎಎ ವಿರೋಧಿಸಿ ನಡೆಯುತ್ತಿರುವ ಈ ಶಾಂತಿಯುತ ಪ್ರತಿಭಟನಾ ಸಭೆ ದಿನದಿಂದ ದಿನಕ್ಕೆ ದಾಖಲೆ ಸೃಷ್ಟಿಸತೊಡಗಿದೆ. ಇತಿಹಾಸ ರಚಿತವಾಗುತ್ತಿದೆ. ಮೊನ್ನೆ ಭಾನುವಾರ ಇಲ್ಲಿ ಸೇರಿದ್ದ ಜನಸಮೂಹದ ಅಂದಾಜು ಒಂದೂವರೆ ಲಕ್ಷ! ಪುಟ್ಟ ಮುಸ್ಲಿಮ್ ಬಾಲಕಿಯ ಕೈಯಲ್ಲಿನ ಭಿತ್ತಿಪತ್ರ ಇಲ್ಲಿನ ಪ್ರದರ್ಶನಕಾರರ ಮಾಡು ಇಲ್ಲವೇ ಮಡಿ ಹೋರಾಟದ ಮನೋಧರ್ಮವನ್ನು ಪ್ರತಿನಿಧಿಸುತ್ತದೆ.

ಜಹಾಂ ಪೈದಾ ಹುಯೋ ವಹಾಂ

ದಫನ್ ಭೀ ಹೋಂಗೇ (ಪಕ್ಕದಲ್ಲಿ ಭಾರತದ ಪುಟ್ಟ ಭೂಪಟ)

ಜೀತ್ ಗಯೇ ತೋ ವತನ್

ಮುಬಾರಕ್

ಹಾರ್ ಗಯೇ ತೋ ಕಫನ್

ಮುಬಾರಕ್

ನೋ ಎನ್.ಆರ್.ಸಿ.

ನೋ ಸಿಎಎ

(ಎಲ್ಲಿ ಜನಿಸಿದ್ದೇವೆಯೋ ಅಲ್ಲಿಯೇ

ಮಣ್ಣಾಗುತ್ತೇವೆ ಕೂಡ

ಗೆದ್ದರೆ ದೇಶ ದಕ್ಕುವ

ಅಭಿನಂದನೆ

ಸೋತರೆ ಸಾವಿನ

ಅಭಿನಂದನೆ)

ತ್ರಿವರ್ಣ ಧ್ವಜಗಳನ್ನು ಹಿಡಿದು ಬೀಸುತ್ತ ಆಜಾದಿ ಘೋಷಣೆಗಳ ಕೂಗುವ ಜನಸಮೂಹ. ತಾಪಮಾನ ಹತ್ತು ಡಿಗ್ರಿಗಳಿಗೆ ಕುಸಿದರೂ, ಚಳಿ ಮೈ ಮರಗಟ್ಟಿಸಿದರೂ ಜಗ್ಗದ ಜನಸಮೂಹ. ಶಾಹೀನ್ ಬಾಗ್ ನ ಸಾರ್ವಜನಿಕ ರಸ್ತೆಯಲ್ಲೇ ಎದ್ದು ನಿಂತಿರುವ ಪ್ರತಿಭಟನಾ ನೆಲೆಯಿದು. ನೆಲದ ಮೇಲೆ ಬಿಡಿಸಿದ ಸಿಎಎ-ಎನ್.ಆರ್.ಸಿ. ವಿರೋಧಿ ಬೃಹತ್ ಚಿತ್ರಗಳು… ಅವುಗಳ ಪಕ್ಕ ಉರಿಯುವ ಮೇಣದ ಬತ್ತಿಗಳು. ಬಾನೆತ್ತರದಲ್ಲಿ ಹಾರಾಡುವ ಕೇಸರಿ ಬಿಳಿ ಹಸಿರಿರುವ ಬಲೂನುಗಳು…

ಮರಗಟ್ಟಿಸುವ ಚಳಿ, ಮಳೆ, ಬೆದರಿಕೆಗಳಿಗೆ ಜಗ್ಗದ ಹೆಣ್ಣುಮಕ್ಕಳು ಇವರು. ನಮ್ಮ ಸಂವಿಧಾನ, ನಮ್ಮ ದೇಶ, ನಮ್ಮ ಉಳಿವಿಗಾಗಿ ಇಲ್ಲಿ ಸೇರುತ್ತಿದ್ದೇವೆ ಎನ್ನುತ್ತಾರೆ. ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಮನಬಂದಂತೆ ಥಳಿಸಿ, ಗುಂಡು ಹಾರಿಸಿ ಪುಂಡಾಟ ನಡೆಸಿದ ಪೊಲೀಸರ ಹೇಯ ವರ್ತನೆಯ ನಂತರ ಆರಂಭವಾದ ಪ್ರತಿಫಟನೆಯಿದು. ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು ಮತ್ತು ಆರು ಮಂದಿ ಪುರುಷರು. ಮರುದಿನದಿಂದ ಪುರುಷರು ಉದ್ಯೋಗಕ್ಕೆ ಹೋದರೂ ಮಹಿಳೆಯರ ಸಂಖ್ಯೆ ಏರುತ್ತಲೇ ಹೋಯಿತು.

ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಮುಖ್ಯ ಸಭಿಕರು. ಹಸುಗೂಸು ಮಕ್ಕಳಿಂದ ಹಿಡಿದು ವೃದ್ದೆಯರವರೆಗೆ ಎಲ್ಲ ವಯೋಮಾನದ ಮಹಿಳೆಯರು. ಹಸಿ ಬಾಣಂತಿಯರು… ಪುಟ್ಟ ಮಕ್ಕಳನ್ನು ಕರೆತಂದ ಅಮ್ಮಂದಿರು..ಯುವತಿಯರು… ವಿದ್ಯಾರ್ಥಿನಿಯರು… ಎಲ್ಲರೂ ನಿರ್ಭೀತರು… ಮನಸಿನ ಮಾತನ್ನು ಗಟ್ಟಿದನಿಯಲ್ಲಿ ಹೇಳುವವರು.. ತಾತ ಮುತ್ತಾತಂದಿರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಸತ್ತವರು…ಇದೇ ನಾವು ಹುಟ್ಟಿದ ಮಣ್ಣು….ಇಲ್ಲಿಯೇ ಮಣ್ಣು ಸೇರುತ್ತೇವೆ… ನಮಗೆ ನಾಗರಿಕತೆ ನಿರಾಕರಿಸುವುದು ಪರಮ ಅನ್ಯಾಯ… ಈ ಕಾನೂನು ವಾಪಸಾಗುವ ತನಕ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎನ್ನುವವರು… ಮಧ್ಯರಾತ್ರಿ ಸಮೀಪಿಸುತ್ತಿದ್ದಂತೆ ಜನಸಮೂಹ ಹಿಗ್ಗುತ್ತದೆಯೇ ವಿನಾ ಕುಗ್ಗುವುದಿಲ್ಲ.

ಟ್ರಕ್ಕುಗಳಲ್ಲಿ ಚಹಾ, ಹಾಲು, ಊಟ ಬರುತ್ತದೆ.. ಅಜ್ಞಾತ ಹಿತೈಷಿಗಳ ಕೊಡುಗೆ. ಸ್ಥಳೀಯ ರಾಜಕಾರಣಿಗಳನ್ನು ದೂರ ಇರಿಸಲಾಗಿದೆ.

ಗುಂಪು ಹತ್ಯೆಗಳಿಗೆ ಮುಸಲ್ಮಾನರು ಬಲಿಯಾದಾಗ ಬೀದಿಗಿಳಿಯದ ಮುಸಲ್ಮಾನ ಹೆಣ್ಣುಮಕ್ಕಳು ಈಗ ಪ್ರತಿಭಟನೆಯ ಕಣಕ್ಕೆ ಇಳಿದಿದ್ದಾರೆ… ಹಿಮ್ಮೆಟ್ಟುವುದಿಲ್ಲ ಎನ್ನುವ ದೃಢನಿಶ್ಚಯ ಅವರದು. ಬುರ್ಖಾಗಳನ್ನು ಹಿಂದಿಟ್ಟು ಬಂದಿದ್ದಾರೆ… ಕಳೆದು ಹೋಗಿದ್ದ ದನಿಗಳನ್ನು ಮರಳಿ ಪಡೆದು ಬಂದಿದ್ದಾರೆ… ನಮ್ಮ ಸಂವಿಧಾನದ ಅಳಿವು ಉಳಿವಿನ ಪ್ರಶ್ನೆಯಿದು, ನಮ್ಮ ಮಕ್ಕಳು ಮೊಮ್ಮಕ್ಕಳ ಭವಿಷ್ಯದ ಪ್ರಶ್ನೆ… ನಮ್ಮ ಅಪ್ಪಂದಿರು… ತಾತಂದಿರು ಕೂಡ ಈ ಮಣ್ಣಿಗಾಗಿ ತ್ಯಾಗ ಮಾಡಿದ್ದಾರೆ.. ನಮ್ಮನ್ನೇಕೆ ಹೊರದಬ್ಬಲಾಗುತ್ತಿದೆ… ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಅರ್ಥವೇನು ಎಂಬ ನೋವಿನ ಕಣ್ಣೀರು ಕೆನ್ನೆಗಿಳಿಯುತ್ತವೆ… ಹಿಂದುಸ್ತಾನ್ ಎಂಬುದು ಗುಲದಸ್ತಾನ್… ಈ ಹೂಗೊಂಚಲಿನಲ್ಲಿ ಬಗೆಬಗೆಯ ಹೂವುಗಳು… ಪರಿಮಳಗಳು ಇಲ್ಲದಿದ್ದರೆ ಹೂಗೊಂಚಲಿನ ವಿಶೇಷತೆಯೇನು ಉಳಿಯುತ್ತದೆ? ಮುಸ್ಲಿಂ ಮಹಿಳೆಯರ ಕಷ್ಟ ಕಣ್ಣೀರು ಅಳಿಸಲೆಂದು ತ್ರಿವಳಿ ತಲಾಖ್ ರದ್ದುಗೊಳಿಸಿ ಕಾನೂನು ತಂದ ನರೇಂದ್ರ ಮೋದಿಯವರಿಗೆ ನಮ್ಮ ಈಗಿನ ಸಂಕಟ ಯಾಕೆ ಅರ್ಥವಾಗುತ್ತಿಲ್ಲ? ನಮಗೆ ಗುಂಡೇಟು, ಲಾಠಿಯೇಟು ಬಿದ್ದರೂ ನಾವು ಲೆಕ್ಕಿಸುವುದಿಲ್ಲ ಎನ್ನುತ್ತಾರೆ.

ಈ ಪ್ರತಿಭಟನೆ ಈಗಾಗಲೆ ಕಣ್ಣುಗಳನ್ನು ಕೆಂಪಾಗಿಸಿದೆ… ದಮನದ ಸಿಡಿಲು ಯಾವ ಕ್ಷಣದಲ್ಲಿ ಬಡಿಯುವುದೋ ಬಲ್ಲವರಾರು… ಆದರೆ ಈ ಮಹಿಳೆಯರ ಮನೋನಿಶ್ಚಯ ದಮನಗಳ ಬಿಸಿಗೆ ಕರಗುವಂತಹುದಲ್ಲ. ಲಕ್ಷ ವಾಹನಗಳು ಸಂಚರಿಸುವ ಈ ರಸ್ತೆಯನ್ನು ಪುನಃ ಸಂಚಾರಕ್ಕೆ ತೆರೆಯಬೇಕೆಂಬ ಅಹವಾಲು ಹೈಕೋರ್ಟ್ ಮೆಟ್ಟಿಲೇರಿದೆ. ಬಲಪ್ರಯೋಗ ನಡೆಸದೆ ಈ ಕ್ರಮ ಜರುಗಿಸುವಂತೆ ನ್ಯಾಯಾಲಯ ಹೇಳಿದೆ.

ಕೈಫಿ ಆಜ್ಮಿಯವರ ಉಠ್ ಮೇರೀ ಜಾನ್.. ಕವಿತೆಯ ಕೆಲ ಸಾಲುಗಳು…

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ

ಖಲ್ಬ್ ಎ ಮಾಹೋಲ್ ಮೇ ಲರ್ಜಾ ಶರರ್ ಎ ಜಂಗ್ ಹೈ ಆಜ್

ಹೋಸಲೇ ವಕ್ತ್ ಕೇ ಔರ್ ಜೀಸ್ತ್ ಕೆ ಯಕ್-ರಂಗ್ ಹೈ ಆಜ್

ಅಬಾಗೀನೋ ಮೇ ತಪಾಂ ವಲ್ವಲಾ-ಎ-ಸಂಗ್ ಹೈ ಆಜ್

ಹುಸ್ನ್ ಔರ್ ಇಶ್ಕ್ ಹಮ್ ಆವಾಜ್ ಓ ಹಮ್- ಆಹಂಗ್ ಹೈ ಆಜ್

ಜಿಸ್ ಮೇಂ ಜಲತಾ ಹೂಂ ಉಸೀ ಆಗ ಮೇ ಜಲನಾ ಹೈ ತುಝೇ

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...