Homeಚಳವಳಿಅಂಬೇಡ್ಕರ್ ಪಟ - ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು. ಅಲ್ಲಿಂದ ಅದು ಒಂದೂವರೆ ಲಕ್ಷಕ್ಕೆ ಏರಿದೆ...

- Advertisement -
- Advertisement -

ರಾಮ್ ರಾಮ್, ಅಲ್ಲಾ ಹೋ ಅಕ್ಬರ್, ವಾಹೇ ಗುರೂ… ಹಿಂದು-ಮುಸ್ಲಿಮ್-ಸಿಖ್- ಕ್ರೈಸ್ತ ಧಾರ್ಮಿಕ ಜಯಕಾರಗಳು, ಜನಗಣಮನ… ಒಂದೇ ಚಪ್ಪರದಡಿ ಕುಳಿತ ಜನಸಮೂಹದಿಂದ ಮೊಳಗುತ್ತವೆ… ಪುರೋಹಿತರು ಹವನ ನೆರವೇರಿಸಿದರೆ ಮುಸಲ್ಮಾನರು ಭಕ್ತಿಯಿಂದ ಕೈ ಮುಗಿದು ಕುಳಿತಿರುತ್ತಾರೆ… ಖುರಾನ್, ಗೀತೆ, ಬೈಬಲ್ ಹಾಗೂ ಗುರು ಗ್ರಂಥಸಾಹೇಬದ ಪಠಣ ಅಕ್ಕಪಕ್ಕದಲ್ಲಿ ಜರುಗುತ್ತದೆ.. ದೇಶಭಕ್ತಿಯ ಘೋಷಣೆಗಳು, ಸಂವಿಧಾನದ ಮುನ್ನುಡಿಯ ವಾಚನ.. ಪ್ರತಿಭಟನೆಯ ಕವಿತೆಗಳು, ಚರ್ಚೆಗಳು, ಭಾಷಣಗಳು.. ಅಂಬೇಡ್ಕರ್- ಗಾಂಧೀ ಚಿತ್ರಪಟಗಳು, ಮೇಣದ ಬತ್ತಿ ಮೆರವಣಿಗೆಗಳು, ತಲೆಗಳಿಗೆ ಸುತ್ತಿಕೊಂಡ ತ್ರಿವರ್ಣ ಧ್ವಜಗಳು.. ಕತ್ತಲಲ್ಲಿ ತಾರೆಗಳಂತೆ ಒಮ್ಮೆಲೆ ಮಿನುಗುವ ಸಾವಿರಾರು ಮೊಬೈಲ್ ಫೋನುಗಳ ಬೆಳಕು… ದೆಹಲಿಯ ಶಾಹೀನ್ ಬಾಗ್ ನಲ್ಲಿ ನಿತ್ಯ ರಾತ್ರಿ ಕಾಣಬರುತ್ತಿರುವ ಮನತುಂಬುವ ಈ ನೋಟಗಳಿಗೆ, ಕಿವಿ ತುಂಬುವ ದನಿಗಳಿಗೆ ತಿಂಗಳು ತುಂಬಿದೆ.

ಎನ್.ಆರ್.ಸಿ-ಸಿಎಎ ವಿರೋಧಿಸಿ ನಡೆಯುತ್ತಿರುವ ಈ ಶಾಂತಿಯುತ ಪ್ರತಿಭಟನಾ ಸಭೆ ದಿನದಿಂದ ದಿನಕ್ಕೆ ದಾಖಲೆ ಸೃಷ್ಟಿಸತೊಡಗಿದೆ. ಇತಿಹಾಸ ರಚಿತವಾಗುತ್ತಿದೆ. ಮೊನ್ನೆ ಭಾನುವಾರ ಇಲ್ಲಿ ಸೇರಿದ್ದ ಜನಸಮೂಹದ ಅಂದಾಜು ಒಂದೂವರೆ ಲಕ್ಷ! ಪುಟ್ಟ ಮುಸ್ಲಿಮ್ ಬಾಲಕಿಯ ಕೈಯಲ್ಲಿನ ಭಿತ್ತಿಪತ್ರ ಇಲ್ಲಿನ ಪ್ರದರ್ಶನಕಾರರ ಮಾಡು ಇಲ್ಲವೇ ಮಡಿ ಹೋರಾಟದ ಮನೋಧರ್ಮವನ್ನು ಪ್ರತಿನಿಧಿಸುತ್ತದೆ.

ಜಹಾಂ ಪೈದಾ ಹುಯೋ ವಹಾಂ

ದಫನ್ ಭೀ ಹೋಂಗೇ (ಪಕ್ಕದಲ್ಲಿ ಭಾರತದ ಪುಟ್ಟ ಭೂಪಟ)

ಜೀತ್ ಗಯೇ ತೋ ವತನ್

ಮುಬಾರಕ್

ಹಾರ್ ಗಯೇ ತೋ ಕಫನ್

ಮುಬಾರಕ್

ನೋ ಎನ್.ಆರ್.ಸಿ.

ನೋ ಸಿಎಎ

(ಎಲ್ಲಿ ಜನಿಸಿದ್ದೇವೆಯೋ ಅಲ್ಲಿಯೇ

ಮಣ್ಣಾಗುತ್ತೇವೆ ಕೂಡ

ಗೆದ್ದರೆ ದೇಶ ದಕ್ಕುವ

ಅಭಿನಂದನೆ

ಸೋತರೆ ಸಾವಿನ

ಅಭಿನಂದನೆ)

ತ್ರಿವರ್ಣ ಧ್ವಜಗಳನ್ನು ಹಿಡಿದು ಬೀಸುತ್ತ ಆಜಾದಿ ಘೋಷಣೆಗಳ ಕೂಗುವ ಜನಸಮೂಹ. ತಾಪಮಾನ ಹತ್ತು ಡಿಗ್ರಿಗಳಿಗೆ ಕುಸಿದರೂ, ಚಳಿ ಮೈ ಮರಗಟ್ಟಿಸಿದರೂ ಜಗ್ಗದ ಜನಸಮೂಹ. ಶಾಹೀನ್ ಬಾಗ್ ನ ಸಾರ್ವಜನಿಕ ರಸ್ತೆಯಲ್ಲೇ ಎದ್ದು ನಿಂತಿರುವ ಪ್ರತಿಭಟನಾ ನೆಲೆಯಿದು. ನೆಲದ ಮೇಲೆ ಬಿಡಿಸಿದ ಸಿಎಎ-ಎನ್.ಆರ್.ಸಿ. ವಿರೋಧಿ ಬೃಹತ್ ಚಿತ್ರಗಳು… ಅವುಗಳ ಪಕ್ಕ ಉರಿಯುವ ಮೇಣದ ಬತ್ತಿಗಳು. ಬಾನೆತ್ತರದಲ್ಲಿ ಹಾರಾಡುವ ಕೇಸರಿ ಬಿಳಿ ಹಸಿರಿರುವ ಬಲೂನುಗಳು…

ಮರಗಟ್ಟಿಸುವ ಚಳಿ, ಮಳೆ, ಬೆದರಿಕೆಗಳಿಗೆ ಜಗ್ಗದ ಹೆಣ್ಣುಮಕ್ಕಳು ಇವರು. ನಮ್ಮ ಸಂವಿಧಾನ, ನಮ್ಮ ದೇಶ, ನಮ್ಮ ಉಳಿವಿಗಾಗಿ ಇಲ್ಲಿ ಸೇರುತ್ತಿದ್ದೇವೆ ಎನ್ನುತ್ತಾರೆ. ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಮನಬಂದಂತೆ ಥಳಿಸಿ, ಗುಂಡು ಹಾರಿಸಿ ಪುಂಡಾಟ ನಡೆಸಿದ ಪೊಲೀಸರ ಹೇಯ ವರ್ತನೆಯ ನಂತರ ಆರಂಭವಾದ ಪ್ರತಿಫಟನೆಯಿದು. ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು ಮತ್ತು ಆರು ಮಂದಿ ಪುರುಷರು. ಮರುದಿನದಿಂದ ಪುರುಷರು ಉದ್ಯೋಗಕ್ಕೆ ಹೋದರೂ ಮಹಿಳೆಯರ ಸಂಖ್ಯೆ ಏರುತ್ತಲೇ ಹೋಯಿತು.

ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಮುಖ್ಯ ಸಭಿಕರು. ಹಸುಗೂಸು ಮಕ್ಕಳಿಂದ ಹಿಡಿದು ವೃದ್ದೆಯರವರೆಗೆ ಎಲ್ಲ ವಯೋಮಾನದ ಮಹಿಳೆಯರು. ಹಸಿ ಬಾಣಂತಿಯರು… ಪುಟ್ಟ ಮಕ್ಕಳನ್ನು ಕರೆತಂದ ಅಮ್ಮಂದಿರು..ಯುವತಿಯರು… ವಿದ್ಯಾರ್ಥಿನಿಯರು… ಎಲ್ಲರೂ ನಿರ್ಭೀತರು… ಮನಸಿನ ಮಾತನ್ನು ಗಟ್ಟಿದನಿಯಲ್ಲಿ ಹೇಳುವವರು.. ತಾತ ಮುತ್ತಾತಂದಿರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಸತ್ತವರು…ಇದೇ ನಾವು ಹುಟ್ಟಿದ ಮಣ್ಣು….ಇಲ್ಲಿಯೇ ಮಣ್ಣು ಸೇರುತ್ತೇವೆ… ನಮಗೆ ನಾಗರಿಕತೆ ನಿರಾಕರಿಸುವುದು ಪರಮ ಅನ್ಯಾಯ… ಈ ಕಾನೂನು ವಾಪಸಾಗುವ ತನಕ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎನ್ನುವವರು… ಮಧ್ಯರಾತ್ರಿ ಸಮೀಪಿಸುತ್ತಿದ್ದಂತೆ ಜನಸಮೂಹ ಹಿಗ್ಗುತ್ತದೆಯೇ ವಿನಾ ಕುಗ್ಗುವುದಿಲ್ಲ.

ಟ್ರಕ್ಕುಗಳಲ್ಲಿ ಚಹಾ, ಹಾಲು, ಊಟ ಬರುತ್ತದೆ.. ಅಜ್ಞಾತ ಹಿತೈಷಿಗಳ ಕೊಡುಗೆ. ಸ್ಥಳೀಯ ರಾಜಕಾರಣಿಗಳನ್ನು ದೂರ ಇರಿಸಲಾಗಿದೆ.

ಗುಂಪು ಹತ್ಯೆಗಳಿಗೆ ಮುಸಲ್ಮಾನರು ಬಲಿಯಾದಾಗ ಬೀದಿಗಿಳಿಯದ ಮುಸಲ್ಮಾನ ಹೆಣ್ಣುಮಕ್ಕಳು ಈಗ ಪ್ರತಿಭಟನೆಯ ಕಣಕ್ಕೆ ಇಳಿದಿದ್ದಾರೆ… ಹಿಮ್ಮೆಟ್ಟುವುದಿಲ್ಲ ಎನ್ನುವ ದೃಢನಿಶ್ಚಯ ಅವರದು. ಬುರ್ಖಾಗಳನ್ನು ಹಿಂದಿಟ್ಟು ಬಂದಿದ್ದಾರೆ… ಕಳೆದು ಹೋಗಿದ್ದ ದನಿಗಳನ್ನು ಮರಳಿ ಪಡೆದು ಬಂದಿದ್ದಾರೆ… ನಮ್ಮ ಸಂವಿಧಾನದ ಅಳಿವು ಉಳಿವಿನ ಪ್ರಶ್ನೆಯಿದು, ನಮ್ಮ ಮಕ್ಕಳು ಮೊಮ್ಮಕ್ಕಳ ಭವಿಷ್ಯದ ಪ್ರಶ್ನೆ… ನಮ್ಮ ಅಪ್ಪಂದಿರು… ತಾತಂದಿರು ಕೂಡ ಈ ಮಣ್ಣಿಗಾಗಿ ತ್ಯಾಗ ಮಾಡಿದ್ದಾರೆ.. ನಮ್ಮನ್ನೇಕೆ ಹೊರದಬ್ಬಲಾಗುತ್ತಿದೆ… ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಅರ್ಥವೇನು ಎಂಬ ನೋವಿನ ಕಣ್ಣೀರು ಕೆನ್ನೆಗಿಳಿಯುತ್ತವೆ… ಹಿಂದುಸ್ತಾನ್ ಎಂಬುದು ಗುಲದಸ್ತಾನ್… ಈ ಹೂಗೊಂಚಲಿನಲ್ಲಿ ಬಗೆಬಗೆಯ ಹೂವುಗಳು… ಪರಿಮಳಗಳು ಇಲ್ಲದಿದ್ದರೆ ಹೂಗೊಂಚಲಿನ ವಿಶೇಷತೆಯೇನು ಉಳಿಯುತ್ತದೆ? ಮುಸ್ಲಿಂ ಮಹಿಳೆಯರ ಕಷ್ಟ ಕಣ್ಣೀರು ಅಳಿಸಲೆಂದು ತ್ರಿವಳಿ ತಲಾಖ್ ರದ್ದುಗೊಳಿಸಿ ಕಾನೂನು ತಂದ ನರೇಂದ್ರ ಮೋದಿಯವರಿಗೆ ನಮ್ಮ ಈಗಿನ ಸಂಕಟ ಯಾಕೆ ಅರ್ಥವಾಗುತ್ತಿಲ್ಲ? ನಮಗೆ ಗುಂಡೇಟು, ಲಾಠಿಯೇಟು ಬಿದ್ದರೂ ನಾವು ಲೆಕ್ಕಿಸುವುದಿಲ್ಲ ಎನ್ನುತ್ತಾರೆ.

ಈ ಪ್ರತಿಭಟನೆ ಈಗಾಗಲೆ ಕಣ್ಣುಗಳನ್ನು ಕೆಂಪಾಗಿಸಿದೆ… ದಮನದ ಸಿಡಿಲು ಯಾವ ಕ್ಷಣದಲ್ಲಿ ಬಡಿಯುವುದೋ ಬಲ್ಲವರಾರು… ಆದರೆ ಈ ಮಹಿಳೆಯರ ಮನೋನಿಶ್ಚಯ ದಮನಗಳ ಬಿಸಿಗೆ ಕರಗುವಂತಹುದಲ್ಲ. ಲಕ್ಷ ವಾಹನಗಳು ಸಂಚರಿಸುವ ಈ ರಸ್ತೆಯನ್ನು ಪುನಃ ಸಂಚಾರಕ್ಕೆ ತೆರೆಯಬೇಕೆಂಬ ಅಹವಾಲು ಹೈಕೋರ್ಟ್ ಮೆಟ್ಟಿಲೇರಿದೆ. ಬಲಪ್ರಯೋಗ ನಡೆಸದೆ ಈ ಕ್ರಮ ಜರುಗಿಸುವಂತೆ ನ್ಯಾಯಾಲಯ ಹೇಳಿದೆ.

ಕೈಫಿ ಆಜ್ಮಿಯವರ ಉಠ್ ಮೇರೀ ಜಾನ್.. ಕವಿತೆಯ ಕೆಲ ಸಾಲುಗಳು…

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ

ಖಲ್ಬ್ ಎ ಮಾಹೋಲ್ ಮೇ ಲರ್ಜಾ ಶರರ್ ಎ ಜಂಗ್ ಹೈ ಆಜ್

ಹೋಸಲೇ ವಕ್ತ್ ಕೇ ಔರ್ ಜೀಸ್ತ್ ಕೆ ಯಕ್-ರಂಗ್ ಹೈ ಆಜ್

ಅಬಾಗೀನೋ ಮೇ ತಪಾಂ ವಲ್ವಲಾ-ಎ-ಸಂಗ್ ಹೈ ಆಜ್

ಹುಸ್ನ್ ಔರ್ ಇಶ್ಕ್ ಹಮ್ ಆವಾಜ್ ಓ ಹಮ್- ಆಹಂಗ್ ಹೈ ಆಜ್

ಜಿಸ್ ಮೇಂ ಜಲತಾ ಹೂಂ ಉಸೀ ಆಗ ಮೇ ಜಲನಾ ಹೈ ತುಝೇ

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...