Homeಚಳವಳಿಅಂಬೇಡ್ಕರ್ ಪಟ - ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು. ಅಲ್ಲಿಂದ ಅದು ಒಂದೂವರೆ ಲಕ್ಷಕ್ಕೆ ಏರಿದೆ...

- Advertisement -
- Advertisement -

ರಾಮ್ ರಾಮ್, ಅಲ್ಲಾ ಹೋ ಅಕ್ಬರ್, ವಾಹೇ ಗುರೂ… ಹಿಂದು-ಮುಸ್ಲಿಮ್-ಸಿಖ್- ಕ್ರೈಸ್ತ ಧಾರ್ಮಿಕ ಜಯಕಾರಗಳು, ಜನಗಣಮನ… ಒಂದೇ ಚಪ್ಪರದಡಿ ಕುಳಿತ ಜನಸಮೂಹದಿಂದ ಮೊಳಗುತ್ತವೆ… ಪುರೋಹಿತರು ಹವನ ನೆರವೇರಿಸಿದರೆ ಮುಸಲ್ಮಾನರು ಭಕ್ತಿಯಿಂದ ಕೈ ಮುಗಿದು ಕುಳಿತಿರುತ್ತಾರೆ… ಖುರಾನ್, ಗೀತೆ, ಬೈಬಲ್ ಹಾಗೂ ಗುರು ಗ್ರಂಥಸಾಹೇಬದ ಪಠಣ ಅಕ್ಕಪಕ್ಕದಲ್ಲಿ ಜರುಗುತ್ತದೆ.. ದೇಶಭಕ್ತಿಯ ಘೋಷಣೆಗಳು, ಸಂವಿಧಾನದ ಮುನ್ನುಡಿಯ ವಾಚನ.. ಪ್ರತಿಭಟನೆಯ ಕವಿತೆಗಳು, ಚರ್ಚೆಗಳು, ಭಾಷಣಗಳು.. ಅಂಬೇಡ್ಕರ್- ಗಾಂಧೀ ಚಿತ್ರಪಟಗಳು, ಮೇಣದ ಬತ್ತಿ ಮೆರವಣಿಗೆಗಳು, ತಲೆಗಳಿಗೆ ಸುತ್ತಿಕೊಂಡ ತ್ರಿವರ್ಣ ಧ್ವಜಗಳು.. ಕತ್ತಲಲ್ಲಿ ತಾರೆಗಳಂತೆ ಒಮ್ಮೆಲೆ ಮಿನುಗುವ ಸಾವಿರಾರು ಮೊಬೈಲ್ ಫೋನುಗಳ ಬೆಳಕು… ದೆಹಲಿಯ ಶಾಹೀನ್ ಬಾಗ್ ನಲ್ಲಿ ನಿತ್ಯ ರಾತ್ರಿ ಕಾಣಬರುತ್ತಿರುವ ಮನತುಂಬುವ ಈ ನೋಟಗಳಿಗೆ, ಕಿವಿ ತುಂಬುವ ದನಿಗಳಿಗೆ ತಿಂಗಳು ತುಂಬಿದೆ.

ಎನ್.ಆರ್.ಸಿ-ಸಿಎಎ ವಿರೋಧಿಸಿ ನಡೆಯುತ್ತಿರುವ ಈ ಶಾಂತಿಯುತ ಪ್ರತಿಭಟನಾ ಸಭೆ ದಿನದಿಂದ ದಿನಕ್ಕೆ ದಾಖಲೆ ಸೃಷ್ಟಿಸತೊಡಗಿದೆ. ಇತಿಹಾಸ ರಚಿತವಾಗುತ್ತಿದೆ. ಮೊನ್ನೆ ಭಾನುವಾರ ಇಲ್ಲಿ ಸೇರಿದ್ದ ಜನಸಮೂಹದ ಅಂದಾಜು ಒಂದೂವರೆ ಲಕ್ಷ! ಪುಟ್ಟ ಮುಸ್ಲಿಮ್ ಬಾಲಕಿಯ ಕೈಯಲ್ಲಿನ ಭಿತ್ತಿಪತ್ರ ಇಲ್ಲಿನ ಪ್ರದರ್ಶನಕಾರರ ಮಾಡು ಇಲ್ಲವೇ ಮಡಿ ಹೋರಾಟದ ಮನೋಧರ್ಮವನ್ನು ಪ್ರತಿನಿಧಿಸುತ್ತದೆ.

ಜಹಾಂ ಪೈದಾ ಹುಯೋ ವಹಾಂ

ದಫನ್ ಭೀ ಹೋಂಗೇ (ಪಕ್ಕದಲ್ಲಿ ಭಾರತದ ಪುಟ್ಟ ಭೂಪಟ)

ಜೀತ್ ಗಯೇ ತೋ ವತನ್

ಮುಬಾರಕ್

ಹಾರ್ ಗಯೇ ತೋ ಕಫನ್

ಮುಬಾರಕ್

ನೋ ಎನ್.ಆರ್.ಸಿ.

ನೋ ಸಿಎಎ

(ಎಲ್ಲಿ ಜನಿಸಿದ್ದೇವೆಯೋ ಅಲ್ಲಿಯೇ

ಮಣ್ಣಾಗುತ್ತೇವೆ ಕೂಡ

ಗೆದ್ದರೆ ದೇಶ ದಕ್ಕುವ

ಅಭಿನಂದನೆ

ಸೋತರೆ ಸಾವಿನ

ಅಭಿನಂದನೆ)

ತ್ರಿವರ್ಣ ಧ್ವಜಗಳನ್ನು ಹಿಡಿದು ಬೀಸುತ್ತ ಆಜಾದಿ ಘೋಷಣೆಗಳ ಕೂಗುವ ಜನಸಮೂಹ. ತಾಪಮಾನ ಹತ್ತು ಡಿಗ್ರಿಗಳಿಗೆ ಕುಸಿದರೂ, ಚಳಿ ಮೈ ಮರಗಟ್ಟಿಸಿದರೂ ಜಗ್ಗದ ಜನಸಮೂಹ. ಶಾಹೀನ್ ಬಾಗ್ ನ ಸಾರ್ವಜನಿಕ ರಸ್ತೆಯಲ್ಲೇ ಎದ್ದು ನಿಂತಿರುವ ಪ್ರತಿಭಟನಾ ನೆಲೆಯಿದು. ನೆಲದ ಮೇಲೆ ಬಿಡಿಸಿದ ಸಿಎಎ-ಎನ್.ಆರ್.ಸಿ. ವಿರೋಧಿ ಬೃಹತ್ ಚಿತ್ರಗಳು… ಅವುಗಳ ಪಕ್ಕ ಉರಿಯುವ ಮೇಣದ ಬತ್ತಿಗಳು. ಬಾನೆತ್ತರದಲ್ಲಿ ಹಾರಾಡುವ ಕೇಸರಿ ಬಿಳಿ ಹಸಿರಿರುವ ಬಲೂನುಗಳು…

ಮರಗಟ್ಟಿಸುವ ಚಳಿ, ಮಳೆ, ಬೆದರಿಕೆಗಳಿಗೆ ಜಗ್ಗದ ಹೆಣ್ಣುಮಕ್ಕಳು ಇವರು. ನಮ್ಮ ಸಂವಿಧಾನ, ನಮ್ಮ ದೇಶ, ನಮ್ಮ ಉಳಿವಿಗಾಗಿ ಇಲ್ಲಿ ಸೇರುತ್ತಿದ್ದೇವೆ ಎನ್ನುತ್ತಾರೆ. ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಮನಬಂದಂತೆ ಥಳಿಸಿ, ಗುಂಡು ಹಾರಿಸಿ ಪುಂಡಾಟ ನಡೆಸಿದ ಪೊಲೀಸರ ಹೇಯ ವರ್ತನೆಯ ನಂತರ ಆರಂಭವಾದ ಪ್ರತಿಫಟನೆಯಿದು. ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು ಮತ್ತು ಆರು ಮಂದಿ ಪುರುಷರು. ಮರುದಿನದಿಂದ ಪುರುಷರು ಉದ್ಯೋಗಕ್ಕೆ ಹೋದರೂ ಮಹಿಳೆಯರ ಸಂಖ್ಯೆ ಏರುತ್ತಲೇ ಹೋಯಿತು.

ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಮುಖ್ಯ ಸಭಿಕರು. ಹಸುಗೂಸು ಮಕ್ಕಳಿಂದ ಹಿಡಿದು ವೃದ್ದೆಯರವರೆಗೆ ಎಲ್ಲ ವಯೋಮಾನದ ಮಹಿಳೆಯರು. ಹಸಿ ಬಾಣಂತಿಯರು… ಪುಟ್ಟ ಮಕ್ಕಳನ್ನು ಕರೆತಂದ ಅಮ್ಮಂದಿರು..ಯುವತಿಯರು… ವಿದ್ಯಾರ್ಥಿನಿಯರು… ಎಲ್ಲರೂ ನಿರ್ಭೀತರು… ಮನಸಿನ ಮಾತನ್ನು ಗಟ್ಟಿದನಿಯಲ್ಲಿ ಹೇಳುವವರು.. ತಾತ ಮುತ್ತಾತಂದಿರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಸತ್ತವರು…ಇದೇ ನಾವು ಹುಟ್ಟಿದ ಮಣ್ಣು….ಇಲ್ಲಿಯೇ ಮಣ್ಣು ಸೇರುತ್ತೇವೆ… ನಮಗೆ ನಾಗರಿಕತೆ ನಿರಾಕರಿಸುವುದು ಪರಮ ಅನ್ಯಾಯ… ಈ ಕಾನೂನು ವಾಪಸಾಗುವ ತನಕ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎನ್ನುವವರು… ಮಧ್ಯರಾತ್ರಿ ಸಮೀಪಿಸುತ್ತಿದ್ದಂತೆ ಜನಸಮೂಹ ಹಿಗ್ಗುತ್ತದೆಯೇ ವಿನಾ ಕುಗ್ಗುವುದಿಲ್ಲ.

ಟ್ರಕ್ಕುಗಳಲ್ಲಿ ಚಹಾ, ಹಾಲು, ಊಟ ಬರುತ್ತದೆ.. ಅಜ್ಞಾತ ಹಿತೈಷಿಗಳ ಕೊಡುಗೆ. ಸ್ಥಳೀಯ ರಾಜಕಾರಣಿಗಳನ್ನು ದೂರ ಇರಿಸಲಾಗಿದೆ.

ಗುಂಪು ಹತ್ಯೆಗಳಿಗೆ ಮುಸಲ್ಮಾನರು ಬಲಿಯಾದಾಗ ಬೀದಿಗಿಳಿಯದ ಮುಸಲ್ಮಾನ ಹೆಣ್ಣುಮಕ್ಕಳು ಈಗ ಪ್ರತಿಭಟನೆಯ ಕಣಕ್ಕೆ ಇಳಿದಿದ್ದಾರೆ… ಹಿಮ್ಮೆಟ್ಟುವುದಿಲ್ಲ ಎನ್ನುವ ದೃಢನಿಶ್ಚಯ ಅವರದು. ಬುರ್ಖಾಗಳನ್ನು ಹಿಂದಿಟ್ಟು ಬಂದಿದ್ದಾರೆ… ಕಳೆದು ಹೋಗಿದ್ದ ದನಿಗಳನ್ನು ಮರಳಿ ಪಡೆದು ಬಂದಿದ್ದಾರೆ… ನಮ್ಮ ಸಂವಿಧಾನದ ಅಳಿವು ಉಳಿವಿನ ಪ್ರಶ್ನೆಯಿದು, ನಮ್ಮ ಮಕ್ಕಳು ಮೊಮ್ಮಕ್ಕಳ ಭವಿಷ್ಯದ ಪ್ರಶ್ನೆ… ನಮ್ಮ ಅಪ್ಪಂದಿರು… ತಾತಂದಿರು ಕೂಡ ಈ ಮಣ್ಣಿಗಾಗಿ ತ್ಯಾಗ ಮಾಡಿದ್ದಾರೆ.. ನಮ್ಮನ್ನೇಕೆ ಹೊರದಬ್ಬಲಾಗುತ್ತಿದೆ… ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಅರ್ಥವೇನು ಎಂಬ ನೋವಿನ ಕಣ್ಣೀರು ಕೆನ್ನೆಗಿಳಿಯುತ್ತವೆ… ಹಿಂದುಸ್ತಾನ್ ಎಂಬುದು ಗುಲದಸ್ತಾನ್… ಈ ಹೂಗೊಂಚಲಿನಲ್ಲಿ ಬಗೆಬಗೆಯ ಹೂವುಗಳು… ಪರಿಮಳಗಳು ಇಲ್ಲದಿದ್ದರೆ ಹೂಗೊಂಚಲಿನ ವಿಶೇಷತೆಯೇನು ಉಳಿಯುತ್ತದೆ? ಮುಸ್ಲಿಂ ಮಹಿಳೆಯರ ಕಷ್ಟ ಕಣ್ಣೀರು ಅಳಿಸಲೆಂದು ತ್ರಿವಳಿ ತಲಾಖ್ ರದ್ದುಗೊಳಿಸಿ ಕಾನೂನು ತಂದ ನರೇಂದ್ರ ಮೋದಿಯವರಿಗೆ ನಮ್ಮ ಈಗಿನ ಸಂಕಟ ಯಾಕೆ ಅರ್ಥವಾಗುತ್ತಿಲ್ಲ? ನಮಗೆ ಗುಂಡೇಟು, ಲಾಠಿಯೇಟು ಬಿದ್ದರೂ ನಾವು ಲೆಕ್ಕಿಸುವುದಿಲ್ಲ ಎನ್ನುತ್ತಾರೆ.

ಈ ಪ್ರತಿಭಟನೆ ಈಗಾಗಲೆ ಕಣ್ಣುಗಳನ್ನು ಕೆಂಪಾಗಿಸಿದೆ… ದಮನದ ಸಿಡಿಲು ಯಾವ ಕ್ಷಣದಲ್ಲಿ ಬಡಿಯುವುದೋ ಬಲ್ಲವರಾರು… ಆದರೆ ಈ ಮಹಿಳೆಯರ ಮನೋನಿಶ್ಚಯ ದಮನಗಳ ಬಿಸಿಗೆ ಕರಗುವಂತಹುದಲ್ಲ. ಲಕ್ಷ ವಾಹನಗಳು ಸಂಚರಿಸುವ ಈ ರಸ್ತೆಯನ್ನು ಪುನಃ ಸಂಚಾರಕ್ಕೆ ತೆರೆಯಬೇಕೆಂಬ ಅಹವಾಲು ಹೈಕೋರ್ಟ್ ಮೆಟ್ಟಿಲೇರಿದೆ. ಬಲಪ್ರಯೋಗ ನಡೆಸದೆ ಈ ಕ್ರಮ ಜರುಗಿಸುವಂತೆ ನ್ಯಾಯಾಲಯ ಹೇಳಿದೆ.

ಕೈಫಿ ಆಜ್ಮಿಯವರ ಉಠ್ ಮೇರೀ ಜಾನ್.. ಕವಿತೆಯ ಕೆಲ ಸಾಲುಗಳು…

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ

ಖಲ್ಬ್ ಎ ಮಾಹೋಲ್ ಮೇ ಲರ್ಜಾ ಶರರ್ ಎ ಜಂಗ್ ಹೈ ಆಜ್

ಹೋಸಲೇ ವಕ್ತ್ ಕೇ ಔರ್ ಜೀಸ್ತ್ ಕೆ ಯಕ್-ರಂಗ್ ಹೈ ಆಜ್

ಅಬಾಗೀನೋ ಮೇ ತಪಾಂ ವಲ್ವಲಾ-ಎ-ಸಂಗ್ ಹೈ ಆಜ್

ಹುಸ್ನ್ ಔರ್ ಇಶ್ಕ್ ಹಮ್ ಆವಾಜ್ ಓ ಹಮ್- ಆಹಂಗ್ ಹೈ ಆಜ್

ಜಿಸ್ ಮೇಂ ಜಲತಾ ಹೂಂ ಉಸೀ ಆಗ ಮೇ ಜಲನಾ ಹೈ ತುಝೇ

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...