Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...