Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...