Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....