Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...