Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...