Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...