Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...