Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...