- Advertisement -
- Advertisement -
ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸರಿಗೆ ಬಂದೂಕು ತೋರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶದಿಂದ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಭೀಕರ ಗಲಭೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ಬಂದೂಕು ತೋರಿದ ವ್ಯಕ್ತಿಯು ಈಶಾನ್ಯ ದೆಹಲಿಯ ಕರವಾಲ್ ನಗರ ನಿವಾಸಿ ಶಾರುಖ್ ಎಂದು ಗುರುತಿಸಲಾಗಿದ್ದು, ಅವರನ್ನು ಉತ್ತರ ಪ್ರದೇಶದ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಫೆಬ್ರವರಿ 24 ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದ ಜಾಫ್ರಾಬಾದ್ನಲ್ಲಿ ಪೋಲೀಸ್ನತ್ತ ಬಂದೂಕು ತೋರಿಸಿದ ಕೆಂಪು ಟೀ ಶರ್ಟ್ನಲ್ಲಿ ಧರಿಸಿದ್ದ ಶಾರುಖ್ ಅವರ ಚಿತ್ರ ಸಾಮಾಜಿಕ ಮಾಧ್ಯಮ ಮತ್ತು ಟಿವಿ ಸುದ್ದಿ ಚಾನೆಲ್ಗಳಲ್ಲಿ ವೈರಲ್ ಆಗಿತ್ತು.