Homeಮುಖಪುಟಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

- Advertisement -
- Advertisement -

ಭೂಸುಧಾರಣೆಯಿಂದ ಉಳುವವರು ಮತ್ತು ದುಡಿಯುವವರ ಭಾರತವಾಗಿದ್ದನ್ನು ಈಗ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಮಮನೋಹ ಲೋಹಿಯಾ ಮತ್ತು ಸಮತಾ ವಿದ್ಯಾಲಯ ಟ್ರಸ್ಟ್ ನಿಂದ  2 ಸಾವಿರ ಮಾಸ್ಕ್ ಗಳು ಮತ್ತು ಸ್ಯಾನಿಟೈಜರ್ ವಿತರಿಸಿ ಅವರು ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಪರಿಣಾಮ ಮಠ-ದೇವಾಲಯಗಳು, ದೊಡ್ಡದೊಡ್ಡ ಭೂಮಾಲೀಕರು, ಜಾಗೀರುದಾರರ ಬಳಿಯಿದ್ದ ಲಕ್ಷಾಂತರ ಎಕರೆ ಭೂಮಿ ಗೇಣಿದಾರರು ಮತ್ತು ಉಳುವವರಿಗೆ ಸೇರುವಂತಾಯಿತು. ಇನ್ನೊಂದೆಡೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಬ್ಯಾಂಕುಗಳು, ವಿಮಾಕ್ಷೇತ್ರ, ವಿದ್ಯುಚ್ಛಕ್ತಿ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಿದರು. ರಾಜಧನ ರದ್ದುಪಡಿಸಿದರು. ಸಂವಿಧಾನದ ಆಶಯಗಳಡಿ ಕೆಲಸ ಮಾಡಿದರು. ದೇವರಾಜ ಅರಸು ಮತ್ತು ಇಂದಿರಾಗಾಂಧಿ ಕೈಗೊಂಡ ಕಾರ್ಯಗಳಿಂದ ಉಳ್ಳವರ ಭಾರತವಾಗಿದ್ದುದು ಉಳುವವರು ದುಡಿಯುವವರ ಭಾರತವಾಯಿತು ಎಂದರು.

ಆದರೆ ಇಂದು ಉಳ್ಳವರು ಪ್ರಬಲರಾಗಿದ್ದಾರೆ. ಪ್ರತೀಕಾರ ಮನೋಭಾವದಿಂದ ಉಳುವವರಿಂದ ಭೂಮಿ ಕಿತ್ತುಕೊಳ್ಳತೊಡಗಿದ್ದಾರೆ. ಉಳ್ಳವರಿಂದ ಸಂವಿಧಾನವನ್ನು ತಿರುಚುವ ಮತ್ತು ಬುಡಮೇಲು ಮಾಡುವ ಸಂಚು ನಡೆಯುತ್ತಿದೆ. ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಇಂದು ಉಳುವವರು ಮತ್ತು ದುಡಿಯುವವರಿಂದ ಭೂಮಿಯನ್ನು ಕಿತ್ತುಕೊಂಡು ಉಳ್ಳವರ ಭಾರತವನ್ನಾಗಿ ಮಾಡಲಾಗುತ್ತಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಸಂವಿಧಾನವನ್ನು ನಾಶ ಮಾಡುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾವುದೇ ಸರ್ಕಾರಕ್ಕೆ ಉತ್ತರದಾಯಿತ್ವ ಇರಬೇಕು. ಸರ್ಕಾರ ತಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಹೊಣೆಗಾರನಾಗಬೇಕು. ಆದರೆ ಇಂದು ಸಂವಿಧಾನ ನೋಡುತ್ತಿಲ್ಲ ಮತ್ತು ಪಾಲಿಸುತ್ತಿಲ್ಲ. ಉದಾರಹರಣೆಗೆ ನೋಟು ಅಮಾನ್ಯೀಕರಣವೇ ಸಾಕ್ಷಿಯಾಗಿದೆ ಎಂದರು.

ಸಂವಿಧಾನದ ಪ್ರಕಾರ ನೋಟು ಅಮಾನ್ಯಗೊಳಿಸುವ ಬಗ್ಗೆ ಆರ್.ಬಿ.ಐ ತೀರ್ಮಾನಿಸಬೇಕಿತ್ತು. ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಕೇಂದ್ರ ಶಿಫಾರಸ್ಸ ಒಪ್ಪಬೇಕಿತ್ತು. ನಂತರ ರಿಸರ್ವ ಬ್ಯಾಂಕ್ ಜಾರಿಗೊಳಿಸಬೇಕಿತ್ತು. ಈ ಹಂತದಲ್ಲಿ ಆರ್.ಬಿ.ಐ ನೋಟು ಮುದ್ರಣದ ತಯಾರಿ ಮಾಡಿಕೊಂಡು ನೋಟುಗಳನ್ನು ಪ್ರಿಂಟ್ ಮಾಡಬೇಕಿತ್ತು. ಬ್ಯಾಂಕು, ಎಟಿಎಂಗಳಿಗೆ ರವಾನಿಸಬೇಕಿತ್ತು. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು. ಇದ್ಯಾವ ಪ್ರಕ್ರಿಯೆಯೂ ನಡೆಯಲಿಲ್ಲ ಎಂದು ಅವರು ಹೇಳಿದರು.

ನೋಟು ಅಮಾನ್ಯೀಕರಣದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿಲ್ಲ. ಹಣಕಾಸು ಸಚಿವರಿಗೆ, ಆರ್.ಬಿ.ಐ ನಿರ್ದೇಶಕರಿಗೂ ತಿಳಿದಿರಲಿಲ್ಲ. ಇಂತಹ ಕ್ರಮದಿಂದ ಆರ್ಥಿಕತೆ ಮತ್ತು ರೈತರು, ಕಾರ್ಮಿಕರು ಜನಸಾಮಾನ್ಯರು ಹೊಡೆತ ತಿಂದರು. ಜಿಎಸ್‌ಟಿಯಿಂದಲೂ ಸಾವಿರರಾರು ಉದ್ದಿಮೆಗಳು ಮುಚ್ಚಿದವು ಎಂದರು.

ಕಾರ್ಯಕ್ರಮದಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಸ್ವಾಗತಿಸಿ, ವಂದಿಸಿದರು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...