Homeಮುಖಪುಟಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

- Advertisement -
- Advertisement -

ಭೂಸುಧಾರಣೆಯಿಂದ ಉಳುವವರು ಮತ್ತು ದುಡಿಯುವವರ ಭಾರತವಾಗಿದ್ದನ್ನು ಈಗ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಮಮನೋಹ ಲೋಹಿಯಾ ಮತ್ತು ಸಮತಾ ವಿದ್ಯಾಲಯ ಟ್ರಸ್ಟ್ ನಿಂದ  2 ಸಾವಿರ ಮಾಸ್ಕ್ ಗಳು ಮತ್ತು ಸ್ಯಾನಿಟೈಜರ್ ವಿತರಿಸಿ ಅವರು ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಪರಿಣಾಮ ಮಠ-ದೇವಾಲಯಗಳು, ದೊಡ್ಡದೊಡ್ಡ ಭೂಮಾಲೀಕರು, ಜಾಗೀರುದಾರರ ಬಳಿಯಿದ್ದ ಲಕ್ಷಾಂತರ ಎಕರೆ ಭೂಮಿ ಗೇಣಿದಾರರು ಮತ್ತು ಉಳುವವರಿಗೆ ಸೇರುವಂತಾಯಿತು. ಇನ್ನೊಂದೆಡೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಬ್ಯಾಂಕುಗಳು, ವಿಮಾಕ್ಷೇತ್ರ, ವಿದ್ಯುಚ್ಛಕ್ತಿ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಿದರು. ರಾಜಧನ ರದ್ದುಪಡಿಸಿದರು. ಸಂವಿಧಾನದ ಆಶಯಗಳಡಿ ಕೆಲಸ ಮಾಡಿದರು. ದೇವರಾಜ ಅರಸು ಮತ್ತು ಇಂದಿರಾಗಾಂಧಿ ಕೈಗೊಂಡ ಕಾರ್ಯಗಳಿಂದ ಉಳ್ಳವರ ಭಾರತವಾಗಿದ್ದುದು ಉಳುವವರು ದುಡಿಯುವವರ ಭಾರತವಾಯಿತು ಎಂದರು.

ಆದರೆ ಇಂದು ಉಳ್ಳವರು ಪ್ರಬಲರಾಗಿದ್ದಾರೆ. ಪ್ರತೀಕಾರ ಮನೋಭಾವದಿಂದ ಉಳುವವರಿಂದ ಭೂಮಿ ಕಿತ್ತುಕೊಳ್ಳತೊಡಗಿದ್ದಾರೆ. ಉಳ್ಳವರಿಂದ ಸಂವಿಧಾನವನ್ನು ತಿರುಚುವ ಮತ್ತು ಬುಡಮೇಲು ಮಾಡುವ ಸಂಚು ನಡೆಯುತ್ತಿದೆ. ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಇಂದು ಉಳುವವರು ಮತ್ತು ದುಡಿಯುವವರಿಂದ ಭೂಮಿಯನ್ನು ಕಿತ್ತುಕೊಂಡು ಉಳ್ಳವರ ಭಾರತವನ್ನಾಗಿ ಮಾಡಲಾಗುತ್ತಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಸಂವಿಧಾನವನ್ನು ನಾಶ ಮಾಡುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾವುದೇ ಸರ್ಕಾರಕ್ಕೆ ಉತ್ತರದಾಯಿತ್ವ ಇರಬೇಕು. ಸರ್ಕಾರ ತಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಹೊಣೆಗಾರನಾಗಬೇಕು. ಆದರೆ ಇಂದು ಸಂವಿಧಾನ ನೋಡುತ್ತಿಲ್ಲ ಮತ್ತು ಪಾಲಿಸುತ್ತಿಲ್ಲ. ಉದಾರಹರಣೆಗೆ ನೋಟು ಅಮಾನ್ಯೀಕರಣವೇ ಸಾಕ್ಷಿಯಾಗಿದೆ ಎಂದರು.

ಸಂವಿಧಾನದ ಪ್ರಕಾರ ನೋಟು ಅಮಾನ್ಯಗೊಳಿಸುವ ಬಗ್ಗೆ ಆರ್.ಬಿ.ಐ ತೀರ್ಮಾನಿಸಬೇಕಿತ್ತು. ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಕೇಂದ್ರ ಶಿಫಾರಸ್ಸ ಒಪ್ಪಬೇಕಿತ್ತು. ನಂತರ ರಿಸರ್ವ ಬ್ಯಾಂಕ್ ಜಾರಿಗೊಳಿಸಬೇಕಿತ್ತು. ಈ ಹಂತದಲ್ಲಿ ಆರ್.ಬಿ.ಐ ನೋಟು ಮುದ್ರಣದ ತಯಾರಿ ಮಾಡಿಕೊಂಡು ನೋಟುಗಳನ್ನು ಪ್ರಿಂಟ್ ಮಾಡಬೇಕಿತ್ತು. ಬ್ಯಾಂಕು, ಎಟಿಎಂಗಳಿಗೆ ರವಾನಿಸಬೇಕಿತ್ತು. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು. ಇದ್ಯಾವ ಪ್ರಕ್ರಿಯೆಯೂ ನಡೆಯಲಿಲ್ಲ ಎಂದು ಅವರು ಹೇಳಿದರು.

ನೋಟು ಅಮಾನ್ಯೀಕರಣದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿಲ್ಲ. ಹಣಕಾಸು ಸಚಿವರಿಗೆ, ಆರ್.ಬಿ.ಐ ನಿರ್ದೇಶಕರಿಗೂ ತಿಳಿದಿರಲಿಲ್ಲ. ಇಂತಹ ಕ್ರಮದಿಂದ ಆರ್ಥಿಕತೆ ಮತ್ತು ರೈತರು, ಕಾರ್ಮಿಕರು ಜನಸಾಮಾನ್ಯರು ಹೊಡೆತ ತಿಂದರು. ಜಿಎಸ್‌ಟಿಯಿಂದಲೂ ಸಾವಿರರಾರು ಉದ್ದಿಮೆಗಳು ಮುಚ್ಚಿದವು ಎಂದರು.

ಕಾರ್ಯಕ್ರಮದಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಸ್ವಾಗತಿಸಿ, ವಂದಿಸಿದರು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...