Homeಮುಖಪುಟಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

- Advertisement -
- Advertisement -

ಭೂಸುಧಾರಣೆಯಿಂದ ಉಳುವವರು ಮತ್ತು ದುಡಿಯುವವರ ಭಾರತವಾಗಿದ್ದನ್ನು ಈಗ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಮಮನೋಹ ಲೋಹಿಯಾ ಮತ್ತು ಸಮತಾ ವಿದ್ಯಾಲಯ ಟ್ರಸ್ಟ್ ನಿಂದ  2 ಸಾವಿರ ಮಾಸ್ಕ್ ಗಳು ಮತ್ತು ಸ್ಯಾನಿಟೈಜರ್ ವಿತರಿಸಿ ಅವರು ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಪರಿಣಾಮ ಮಠ-ದೇವಾಲಯಗಳು, ದೊಡ್ಡದೊಡ್ಡ ಭೂಮಾಲೀಕರು, ಜಾಗೀರುದಾರರ ಬಳಿಯಿದ್ದ ಲಕ್ಷಾಂತರ ಎಕರೆ ಭೂಮಿ ಗೇಣಿದಾರರು ಮತ್ತು ಉಳುವವರಿಗೆ ಸೇರುವಂತಾಯಿತು. ಇನ್ನೊಂದೆಡೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಬ್ಯಾಂಕುಗಳು, ವಿಮಾಕ್ಷೇತ್ರ, ವಿದ್ಯುಚ್ಛಕ್ತಿ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಿದರು. ರಾಜಧನ ರದ್ದುಪಡಿಸಿದರು. ಸಂವಿಧಾನದ ಆಶಯಗಳಡಿ ಕೆಲಸ ಮಾಡಿದರು. ದೇವರಾಜ ಅರಸು ಮತ್ತು ಇಂದಿರಾಗಾಂಧಿ ಕೈಗೊಂಡ ಕಾರ್ಯಗಳಿಂದ ಉಳ್ಳವರ ಭಾರತವಾಗಿದ್ದುದು ಉಳುವವರು ದುಡಿಯುವವರ ಭಾರತವಾಯಿತು ಎಂದರು.

ಆದರೆ ಇಂದು ಉಳ್ಳವರು ಪ್ರಬಲರಾಗಿದ್ದಾರೆ. ಪ್ರತೀಕಾರ ಮನೋಭಾವದಿಂದ ಉಳುವವರಿಂದ ಭೂಮಿ ಕಿತ್ತುಕೊಳ್ಳತೊಡಗಿದ್ದಾರೆ. ಉಳ್ಳವರಿಂದ ಸಂವಿಧಾನವನ್ನು ತಿರುಚುವ ಮತ್ತು ಬುಡಮೇಲು ಮಾಡುವ ಸಂಚು ನಡೆಯುತ್ತಿದೆ. ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಇಂದು ಉಳುವವರು ಮತ್ತು ದುಡಿಯುವವರಿಂದ ಭೂಮಿಯನ್ನು ಕಿತ್ತುಕೊಂಡು ಉಳ್ಳವರ ಭಾರತವನ್ನಾಗಿ ಮಾಡಲಾಗುತ್ತಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಸಂವಿಧಾನವನ್ನು ನಾಶ ಮಾಡುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾವುದೇ ಸರ್ಕಾರಕ್ಕೆ ಉತ್ತರದಾಯಿತ್ವ ಇರಬೇಕು. ಸರ್ಕಾರ ತಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಹೊಣೆಗಾರನಾಗಬೇಕು. ಆದರೆ ಇಂದು ಸಂವಿಧಾನ ನೋಡುತ್ತಿಲ್ಲ ಮತ್ತು ಪಾಲಿಸುತ್ತಿಲ್ಲ. ಉದಾರಹರಣೆಗೆ ನೋಟು ಅಮಾನ್ಯೀಕರಣವೇ ಸಾಕ್ಷಿಯಾಗಿದೆ ಎಂದರು.

ಸಂವಿಧಾನದ ಪ್ರಕಾರ ನೋಟು ಅಮಾನ್ಯಗೊಳಿಸುವ ಬಗ್ಗೆ ಆರ್.ಬಿ.ಐ ತೀರ್ಮಾನಿಸಬೇಕಿತ್ತು. ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಕೇಂದ್ರ ಶಿಫಾರಸ್ಸ ಒಪ್ಪಬೇಕಿತ್ತು. ನಂತರ ರಿಸರ್ವ ಬ್ಯಾಂಕ್ ಜಾರಿಗೊಳಿಸಬೇಕಿತ್ತು. ಈ ಹಂತದಲ್ಲಿ ಆರ್.ಬಿ.ಐ ನೋಟು ಮುದ್ರಣದ ತಯಾರಿ ಮಾಡಿಕೊಂಡು ನೋಟುಗಳನ್ನು ಪ್ರಿಂಟ್ ಮಾಡಬೇಕಿತ್ತು. ಬ್ಯಾಂಕು, ಎಟಿಎಂಗಳಿಗೆ ರವಾನಿಸಬೇಕಿತ್ತು. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು. ಇದ್ಯಾವ ಪ್ರಕ್ರಿಯೆಯೂ ನಡೆಯಲಿಲ್ಲ ಎಂದು ಅವರು ಹೇಳಿದರು.

ನೋಟು ಅಮಾನ್ಯೀಕರಣದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿಲ್ಲ. ಹಣಕಾಸು ಸಚಿವರಿಗೆ, ಆರ್.ಬಿ.ಐ ನಿರ್ದೇಶಕರಿಗೂ ತಿಳಿದಿರಲಿಲ್ಲ. ಇಂತಹ ಕ್ರಮದಿಂದ ಆರ್ಥಿಕತೆ ಮತ್ತು ರೈತರು, ಕಾರ್ಮಿಕರು ಜನಸಾಮಾನ್ಯರು ಹೊಡೆತ ತಿಂದರು. ಜಿಎಸ್‌ಟಿಯಿಂದಲೂ ಸಾವಿರರಾರು ಉದ್ದಿಮೆಗಳು ಮುಚ್ಚಿದವು ಎಂದರು.

ಕಾರ್ಯಕ್ರಮದಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಸ್ವಾಗತಿಸಿ, ವಂದಿಸಿದರು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...