Homeಮುಖಪುಟಶಕ್ತಿ ಯೋಜನೆ ನಮ್ಮಲ್ಲೂ ಜಾರಿಗೊಳಿಸುತ್ತೇವೆ: ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ

ಶಕ್ತಿ ಯೋಜನೆ ನಮ್ಮಲ್ಲೂ ಜಾರಿಗೊಳಿಸುತ್ತೇವೆ: ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ

- Advertisement -
- Advertisement -

ರಾಜ್ಯದ ಶಕ್ತಿ ಯೋಜನೆ ಮಾದರಿಯನ್ನು ಆಂಧ್ರಪ್ರದೇಶದಲ್ಲಿ ಜಾರಿಗೊಳಿಸುತ್ತೇವೆ ಎಂದು ಅಲ್ಲಿನ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಎಂಬ ನಾಲ್ಕು ಸರ್ಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ರಾಜ್ಯದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಆಂಧ್ರ ಸರ್ಕಾರದ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ

ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಅವರೊಂದಿಗೆ, ಆಂಧ್ರ ಸರ್ಕಾರದ ಸಚಿವರುಗಾಳಾದ ಗೃಹ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಂಧ್ಯಾ ರಾಣಿ ಸೇರಿದಂತೆ ರಾಜ್ಯದ ನಿಯೋಗದೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಂಧ್ರಪ್ರದೇಶದ ಆಡಳಿತಾರೂಢ ಮೈತ್ರಿಕೂಟವು ತನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ಸೂಪರ್ ಸಿಕ್ಸ್” ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪರಿಚಯಿಸುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ನಿಯೋಗದ ಈ ಸಭೆಯು ಮಹತ್ವದ್ದಾಗಿದ್ದು, ಸರ್ಕಾರವು ನೀಡಿದ್ದ ಭರವಸೆಗಳಲ್ಲಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣವೂ ಸೇರಿತ್ತು. ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಯೋಜನೆಯನ್ನು ಜಾರಿಗೊಳಿಸುವ ಕಾರ್ಯಸಾಧ್ಯತೆ, ಪ್ರಯೋಜನಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳಲು ನಿಯೋಗವು ಪ್ರಯತ್ನಿಸಿತು.

“ಶಕ್ತಿ ಯೋಜನೆಯು ರಾಷ್ಟ್ರದಾದ್ಯಂತ ಸುದ್ದಿ ಮಾಡಿದೆ. ಇದು ದುಡಿಯುವ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಬಡವರ ಪರವಾದ ಉಪಕ್ರಮವಾಗಿದೆ. ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಜನಪರ ಯೋಜನೆಗಳನ್ನು ಪ್ರಾರಂಭಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ

ಆಂಧ್ರಪ್ರದೇಶದ ನಿಯೋಗದಲ್ಲಿ ಹಣಕಾಸು ಕಾರ್ಯದರ್ಶಿ ರೊನಾಲ್ಡ್ ರೋಸ್ ಮತ್ತು ಸಾರಿಗೆ ಕಾರ್ಯದರ್ಶಿ ಕಾಂತಿಲಾಲ್ ದಂಡೆ ಕೂಡ ಇದ್ದರು. ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಮತ್ತು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್ ನಿರ್ದೇಶಕಿ ನಂದಿನಿ ದೇವಿ ಬರಮಾಡಿಕೊಂಡರು.

ರಾಜ್ಯದ ಅಧಿಕಾರಿಗಳು ಶಕ್ತಿ ಯೋಜನೆಯ ಯೋಜನೆ ಮತ್ತು ಅನುಷ್ಠಾನದ ಬಗ್ಗೆ ವಿವರವಾದ ಒಳನೋಟಗಳನ್ನು ಒದಗಿಸಿದರು, ಆಂಧ್ರಪ್ರದೇಶ ತಂಡಕ್ಕೆ ಅಮೂಲ್ಯವಾದ ಮಾಹಿತಿಗಳನ್ನು ನೀಡಿದ್ದಾರೆ. ರಾಜ್ಯದ ಶಕ್ತಿ ಯೋಜನೆಯು ಇತರ ರಾಜ್ಯಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಾಜದ ತಳಮಟ್ಟದಲ್ಲಿರುವ ವರ್ಗಗಳಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಸಾರ್ವಜನಿಕ ಕಲ್ಯಾಣ ಯೋಜನೆಗಳ ಮೇಲೆ ದೇಶದಾದ್ಯಂತ ಗಮನಿಸಲಾಗುತ್ತಿದೆ ಎಂಬುವುದನ್ನು ಈ ಭೇಟಿಯು ನಿರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...