Homeಮುಖಪುಟಶಕ್ತಿ ಯೋಜನೆ ನಮ್ಮಲ್ಲೂ ಜಾರಿಗೊಳಿಸುತ್ತೇವೆ: ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ

ಶಕ್ತಿ ಯೋಜನೆ ನಮ್ಮಲ್ಲೂ ಜಾರಿಗೊಳಿಸುತ್ತೇವೆ: ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ

- Advertisement -
- Advertisement -

ರಾಜ್ಯದ ಶಕ್ತಿ ಯೋಜನೆ ಮಾದರಿಯನ್ನು ಆಂಧ್ರಪ್ರದೇಶದಲ್ಲಿ ಜಾರಿಗೊಳಿಸುತ್ತೇವೆ ಎಂದು ಅಲ್ಲಿನ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಎಂಬ ನಾಲ್ಕು ಸರ್ಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ರಾಜ್ಯದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಆಂಧ್ರ ಸರ್ಕಾರದ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ

ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಅವರೊಂದಿಗೆ, ಆಂಧ್ರ ಸರ್ಕಾರದ ಸಚಿವರುಗಾಳಾದ ಗೃಹ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಂಧ್ಯಾ ರಾಣಿ ಸೇರಿದಂತೆ ರಾಜ್ಯದ ನಿಯೋಗದೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಂಧ್ರಪ್ರದೇಶದ ಆಡಳಿತಾರೂಢ ಮೈತ್ರಿಕೂಟವು ತನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ಸೂಪರ್ ಸಿಕ್ಸ್” ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪರಿಚಯಿಸುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ನಿಯೋಗದ ಈ ಸಭೆಯು ಮಹತ್ವದ್ದಾಗಿದ್ದು, ಸರ್ಕಾರವು ನೀಡಿದ್ದ ಭರವಸೆಗಳಲ್ಲಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣವೂ ಸೇರಿತ್ತು. ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಯೋಜನೆಯನ್ನು ಜಾರಿಗೊಳಿಸುವ ಕಾರ್ಯಸಾಧ್ಯತೆ, ಪ್ರಯೋಜನಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳಲು ನಿಯೋಗವು ಪ್ರಯತ್ನಿಸಿತು.

“ಶಕ್ತಿ ಯೋಜನೆಯು ರಾಷ್ಟ್ರದಾದ್ಯಂತ ಸುದ್ದಿ ಮಾಡಿದೆ. ಇದು ದುಡಿಯುವ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಬಡವರ ಪರವಾದ ಉಪಕ್ರಮವಾಗಿದೆ. ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಜನಪರ ಯೋಜನೆಗಳನ್ನು ಪ್ರಾರಂಭಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ

ಆಂಧ್ರಪ್ರದೇಶದ ನಿಯೋಗದಲ್ಲಿ ಹಣಕಾಸು ಕಾರ್ಯದರ್ಶಿ ರೊನಾಲ್ಡ್ ರೋಸ್ ಮತ್ತು ಸಾರಿಗೆ ಕಾರ್ಯದರ್ಶಿ ಕಾಂತಿಲಾಲ್ ದಂಡೆ ಕೂಡ ಇದ್ದರು. ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಮತ್ತು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್ ನಿರ್ದೇಶಕಿ ನಂದಿನಿ ದೇವಿ ಬರಮಾಡಿಕೊಂಡರು.

ರಾಜ್ಯದ ಅಧಿಕಾರಿಗಳು ಶಕ್ತಿ ಯೋಜನೆಯ ಯೋಜನೆ ಮತ್ತು ಅನುಷ್ಠಾನದ ಬಗ್ಗೆ ವಿವರವಾದ ಒಳನೋಟಗಳನ್ನು ಒದಗಿಸಿದರು, ಆಂಧ್ರಪ್ರದೇಶ ತಂಡಕ್ಕೆ ಅಮೂಲ್ಯವಾದ ಮಾಹಿತಿಗಳನ್ನು ನೀಡಿದ್ದಾರೆ. ರಾಜ್ಯದ ಶಕ್ತಿ ಯೋಜನೆಯು ಇತರ ರಾಜ್ಯಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಾಜದ ತಳಮಟ್ಟದಲ್ಲಿರುವ ವರ್ಗಗಳಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಸಾರ್ವಜನಿಕ ಕಲ್ಯಾಣ ಯೋಜನೆಗಳ ಮೇಲೆ ದೇಶದಾದ್ಯಂತ ಗಮನಿಸಲಾಗುತ್ತಿದೆ ಎಂಬುವುದನ್ನು ಈ ಭೇಟಿಯು ನಿರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...