Homeಕರ್ನಾಟಕಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ...

ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

ಒಡಿಸ್ಸಾ ರೈಲು ದುರಂತಕ್ಕೆ ಕೋಮು ಬಣ್ಣ ಹಚ್ಚಲು ಯತ್ನಿಸಿ ಬಿಜೆಪಿ ನಾಯಕಿ ಎಸ್.ಶಕುಂತಲಾ ಟೀಕೆಗೆ ಗುರಿಯಾಗಿದ್ದಾರೆ

- Advertisement -
- Advertisement -

ಒಡಿಶಾದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಹೇಳಿದ್ದಾರೆ. ಆದರೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್​ ಎನ್ನುವವರು ಈ ದುರಂತಕ್ಕೆ ಮಸೀದಿ ಕಾರಣ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಸಧ್ಯ ಅದು ವೈರಲ್ ಆಗುತ್ತಿದೆ. ಈ ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ಎನ್ನುವವರು ಈ ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಕೆಲವರು ಒಡಿಶಾ ಬಾಲಸೋರ್ ರೈಲು ದುರಂತಕ್ಕೆ ಜಿಹಾದಿಗಳು ಕಾರಣ ಎಂದು ಘಟನೆ ನಡೆದ ಸಮೀಪವಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಎಸ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಮಸೀದಿ ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಒಡಿಶಾ ಪೊಲೀಸರು ಈ ಸುಳ್ಳು ಸುದ್ದಿ ಬಗ್ಗೆ ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

”ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೊಡ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು . ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಒಡಿಶಾದ ಭೀಕರ ರೈಲು ದುರಂತಕ್ಕೆ ಮುಸ್ಲಿಂ ಸಮುದಾಯ ಕಾರಣವೆಂದು ಘಟನೆ ಸಮೀಪದಲ್ಲಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇದರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ರೀತಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನ ಮಾಡಿರುವ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಮಸೀದಿಯಲ್ಲ; ಮಂದಿರ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಚಿತ್ರದಲ್ಲಿ ಕಂಡುಬರುವ ಗುರುತು ಮಾಡಲಾದ ಧಾರ್ಮಿಕ ಕೇಂದ್ರ ಮಸೀದಿಯಲ್ಲ ಎಂದು ಸ್ಪಷ್ಟವಾಗಿದೆ. ಬದಲಿಗೆ ಗುರುತು ಮಾಡಿರುವ ಚಿತ್ರವು ದೇವಸ್ಥಾನ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ.

ಅಪಘಾತ ನಡೆದ ಸ್ಥಳದಲ್ಲಿ ಹಾಜರಿದ್ದ ಪತ್ರಕರ್ತ ತಮಲ್ ಸಹಾ ಅವರನ್ನು ಆಲ್ಟ್‌ನ್ಯೂಸ್ ತಂಡ ಸಂಪರ್ಕಿಸಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಕಂಡುಬರುವ ರಚನೆಯು ನಿಜವಾಗಿಯೂ ದೇವಾಲಯವಾಗಿದೆ ಎಂದು ಅವರು ‘ಆಲ್ಟ್ ನ್ಯೂಸ್‌’ಗೆ ಖಚಿತಪಡಿಸಿದ್ದಾರೆ.

ವೈರಲ್ ಪೋಸ್ಟ್‌ನಲ್ಲಿ ಮಸೀದಿ ಎಂದು ಪ್ರತಿಪಾದಿಸಿರುವ ಬಿಳಿ ಬಣ್ಣದ ಕಟ್ಟಡವು ಇಸ್ಕಾನ್ ದೇವಸ್ಥಾನವಾಗಿದೆ. ಐದು ತಿಂಗಳ ಹಿಂದೆ ಅಪ್‌ಲೋಡ್ ಮಾಡಲಾದ ದೇವಾಲಯದ ಯೂಟ್ಯೂಬ್ ವೀಡಿಯೊದಲ್ಲಿಯೂ ಇದು ಸ್ಪಷ್ಟವಾಗುತ್ತದೆ. ವಿಡಿಯೋವನ್ನು ಅಪ್‌ಲೋಡ್ ಮಾಡುವ ಸಂದರ್ಭದಲ್ಲಿ ದೇವಾಲಯದ ನಿರ್ಮಾಣದ ಕೆಲಸ ಪ್ರಗತಿಯಲಿರುವುದು. ಗೊತ್ತಾಗುತ್ತದೆ.

ಆಲ್ಟ್‌ನ್ಯೂಸ್ ತಂಡಕ್ಕೆ ಮಾಹಿತಿ ನೀಡಿರುವ ಪತ್ರಕರ್ತ ತಮಾಲ್ ಸಹಾ ಅವರು ದೇವಾಲಯಕ್ಕೆ ಭೇಟಿ ನೀಡಿ, ದೇವಾಲಯದ ಹೊರಗೆ ಇಸ್ಕಾನ್ ಬಹನಾಗ ಎಂಬ ಬೋರ್ಡ್‌ ಇರುವ ಚಿತ್ರವನ್ನು ಕಳುಹಿಸಿದ್ದಾರೆ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ. ದೇವಸ್ಥಾನದ ಪ್ರವೇಶ ದ್ವಾರದ ಚಿತ್ರವನ್ನು ನೋಡಬಹುದು.

ಉದ್ದೇಶಿತ ಮಸೀದಿಯನ್ನು ತೋರಿಸುವ ವೈರಲ್ ಚಿತ್ರ ಮತ್ತು ರಾಯಿಟರ್ಸ್ ವರದಿಯಲ್ಲಿನ ಚಿತ್ರಗಳನ್ನು ಹೋಲಿಕೆ ಮಾಡಿದಾಗ ಈ ಮೂರು ಚಿತ್ರಗಳು ಒಂದೇ ಎಂಬುದು ಸ್ಪಷ್ಟವಾಗುತ್ತದೆ. ಅಂದರೆ, ವೈರಲ್ ಪೋಸ್ಟ್‌ಗಳಲ್ಲಿ, ಅದನ್ನು ಮಸೀದಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದ್ದು, ಅದು ನಿಜವಾಗಿಯೂ ದೇವಾಲಯವಾಗಿದೆ.

ಬಹನಾಗಾದ ಇಸ್ಕಾನ್ ದೇವಾಲಯದ ಆಡಳಿತ ಮಂಡಳಿಯ ಸದಸ್ಯರನ್ನು ಆಲ್ಟ್‌ನ್ಯೂಸ್ ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಅವರು ದೇವಾಲಯದ ಸಮೀಪವಿರುವ ಹಳಿಗಳ ಮೇಲೆ ರೈಲು ಅಪಘಾತ ಸಂಭವಿಸಿರುವುದನ್ನು ಖಚಿತಪಡಿಸಿದ್ದಾರೆ. ಅಪಘಾತ ಸ್ಥಳದ ವೈರಲ್ ಚಿತ್ರದಲ್ಲಿ ಟ್ರ್ಯಾಕ್‌ಗಳ ಪಕ್ಕದಲ್ಲಿ ಕಂಡುಬರುವ ಕಟ್ಟಡವು ಇಸ್ಕಾನ್ ದೇವಾಲಯವಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Bjp shakuntala should be immediate FIR and arrest the odisha govt to bjp facist trying to provoke the incident as to show the Hindus bcoz of masjid it happened if not accident not happen. Sharing humanity of feel sad what happen to the people’s who died are severe wounded .sharing with poisoning bhagwa terrorist should arrest else try to do again again giving other angels.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...