Homeಕರ್ನಾಟಕಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ...

ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

ಒಡಿಸ್ಸಾ ರೈಲು ದುರಂತಕ್ಕೆ ಕೋಮು ಬಣ್ಣ ಹಚ್ಚಲು ಯತ್ನಿಸಿ ಬಿಜೆಪಿ ನಾಯಕಿ ಎಸ್.ಶಕುಂತಲಾ ಟೀಕೆಗೆ ಗುರಿಯಾಗಿದ್ದಾರೆ

- Advertisement -
- Advertisement -

ಒಡಿಶಾದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಹೇಳಿದ್ದಾರೆ. ಆದರೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್​ ಎನ್ನುವವರು ಈ ದುರಂತಕ್ಕೆ ಮಸೀದಿ ಕಾರಣ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಸಧ್ಯ ಅದು ವೈರಲ್ ಆಗುತ್ತಿದೆ. ಈ ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ಎನ್ನುವವರು ಈ ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಕೆಲವರು ಒಡಿಶಾ ಬಾಲಸೋರ್ ರೈಲು ದುರಂತಕ್ಕೆ ಜಿಹಾದಿಗಳು ಕಾರಣ ಎಂದು ಘಟನೆ ನಡೆದ ಸಮೀಪವಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಎಸ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಮಸೀದಿ ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಒಡಿಶಾ ಪೊಲೀಸರು ಈ ಸುಳ್ಳು ಸುದ್ದಿ ಬಗ್ಗೆ ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

”ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೊಡ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು . ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಒಡಿಶಾದ ಭೀಕರ ರೈಲು ದುರಂತಕ್ಕೆ ಮುಸ್ಲಿಂ ಸಮುದಾಯ ಕಾರಣವೆಂದು ಘಟನೆ ಸಮೀಪದಲ್ಲಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇದರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ರೀತಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನ ಮಾಡಿರುವ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಮಸೀದಿಯಲ್ಲ; ಮಂದಿರ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಚಿತ್ರದಲ್ಲಿ ಕಂಡುಬರುವ ಗುರುತು ಮಾಡಲಾದ ಧಾರ್ಮಿಕ ಕೇಂದ್ರ ಮಸೀದಿಯಲ್ಲ ಎಂದು ಸ್ಪಷ್ಟವಾಗಿದೆ. ಬದಲಿಗೆ ಗುರುತು ಮಾಡಿರುವ ಚಿತ್ರವು ದೇವಸ್ಥಾನ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ.

ಅಪಘಾತ ನಡೆದ ಸ್ಥಳದಲ್ಲಿ ಹಾಜರಿದ್ದ ಪತ್ರಕರ್ತ ತಮಲ್ ಸಹಾ ಅವರನ್ನು ಆಲ್ಟ್‌ನ್ಯೂಸ್ ತಂಡ ಸಂಪರ್ಕಿಸಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಕಂಡುಬರುವ ರಚನೆಯು ನಿಜವಾಗಿಯೂ ದೇವಾಲಯವಾಗಿದೆ ಎಂದು ಅವರು ‘ಆಲ್ಟ್ ನ್ಯೂಸ್‌’ಗೆ ಖಚಿತಪಡಿಸಿದ್ದಾರೆ.

ವೈರಲ್ ಪೋಸ್ಟ್‌ನಲ್ಲಿ ಮಸೀದಿ ಎಂದು ಪ್ರತಿಪಾದಿಸಿರುವ ಬಿಳಿ ಬಣ್ಣದ ಕಟ್ಟಡವು ಇಸ್ಕಾನ್ ದೇವಸ್ಥಾನವಾಗಿದೆ. ಐದು ತಿಂಗಳ ಹಿಂದೆ ಅಪ್‌ಲೋಡ್ ಮಾಡಲಾದ ದೇವಾಲಯದ ಯೂಟ್ಯೂಬ್ ವೀಡಿಯೊದಲ್ಲಿಯೂ ಇದು ಸ್ಪಷ್ಟವಾಗುತ್ತದೆ. ವಿಡಿಯೋವನ್ನು ಅಪ್‌ಲೋಡ್ ಮಾಡುವ ಸಂದರ್ಭದಲ್ಲಿ ದೇವಾಲಯದ ನಿರ್ಮಾಣದ ಕೆಲಸ ಪ್ರಗತಿಯಲಿರುವುದು. ಗೊತ್ತಾಗುತ್ತದೆ.

ಆಲ್ಟ್‌ನ್ಯೂಸ್ ತಂಡಕ್ಕೆ ಮಾಹಿತಿ ನೀಡಿರುವ ಪತ್ರಕರ್ತ ತಮಾಲ್ ಸಹಾ ಅವರು ದೇವಾಲಯಕ್ಕೆ ಭೇಟಿ ನೀಡಿ, ದೇವಾಲಯದ ಹೊರಗೆ ಇಸ್ಕಾನ್ ಬಹನಾಗ ಎಂಬ ಬೋರ್ಡ್‌ ಇರುವ ಚಿತ್ರವನ್ನು ಕಳುಹಿಸಿದ್ದಾರೆ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ. ದೇವಸ್ಥಾನದ ಪ್ರವೇಶ ದ್ವಾರದ ಚಿತ್ರವನ್ನು ನೋಡಬಹುದು.

ಉದ್ದೇಶಿತ ಮಸೀದಿಯನ್ನು ತೋರಿಸುವ ವೈರಲ್ ಚಿತ್ರ ಮತ್ತು ರಾಯಿಟರ್ಸ್ ವರದಿಯಲ್ಲಿನ ಚಿತ್ರಗಳನ್ನು ಹೋಲಿಕೆ ಮಾಡಿದಾಗ ಈ ಮೂರು ಚಿತ್ರಗಳು ಒಂದೇ ಎಂಬುದು ಸ್ಪಷ್ಟವಾಗುತ್ತದೆ. ಅಂದರೆ, ವೈರಲ್ ಪೋಸ್ಟ್‌ಗಳಲ್ಲಿ, ಅದನ್ನು ಮಸೀದಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದ್ದು, ಅದು ನಿಜವಾಗಿಯೂ ದೇವಾಲಯವಾಗಿದೆ.

ಬಹನಾಗಾದ ಇಸ್ಕಾನ್ ದೇವಾಲಯದ ಆಡಳಿತ ಮಂಡಳಿಯ ಸದಸ್ಯರನ್ನು ಆಲ್ಟ್‌ನ್ಯೂಸ್ ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಅವರು ದೇವಾಲಯದ ಸಮೀಪವಿರುವ ಹಳಿಗಳ ಮೇಲೆ ರೈಲು ಅಪಘಾತ ಸಂಭವಿಸಿರುವುದನ್ನು ಖಚಿತಪಡಿಸಿದ್ದಾರೆ. ಅಪಘಾತ ಸ್ಥಳದ ವೈರಲ್ ಚಿತ್ರದಲ್ಲಿ ಟ್ರ್ಯಾಕ್‌ಗಳ ಪಕ್ಕದಲ್ಲಿ ಕಂಡುಬರುವ ಕಟ್ಟಡವು ಇಸ್ಕಾನ್ ದೇವಾಲಯವಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Bjp shakuntala should be immediate FIR and arrest the odisha govt to bjp facist trying to provoke the incident as to show the Hindus bcoz of masjid it happened if not accident not happen. Sharing humanity of feel sad what happen to the people’s who died are severe wounded .sharing with poisoning bhagwa terrorist should arrest else try to do again again giving other angels.

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...