Homeಕರ್ನಾಟಕಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

ಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

- Advertisement -
- Advertisement -

ಬುಧವಾರ ವಿಧಾನಸಭೆ ಶೂನ್ಯ ವೇಳೆಯಲ್ಲಿ ಡಾ.ಅಂಬೇಡ್ಕರ್‍‌ಗೆ ಜೈನ್ ವಿಶ್ವ ವಿದ್ಯಾನಿಲಯದಲ್ಲಿ ಅಪಮಾನ ಮಾಡಿರುವ ಘಟನೆ ಪ್ರತಿಧ್ವನಿಸಿತು. ವಿಶ್ವವಿದ್ಯಾಲಯದ ಮಾನ್ಯತೆ ರದ್ದು ಮಾಡಬೇಕು ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಜೆಡಿಎಸ್‌ ಸದಸ್ಯ ಕೆ.ಅನ್ನದಾನಿ ವಿಷಯ ಪ್ರಸ್ತಾಪಿಸಿ, ”ಜೈನ್, ವಿಶ್ವವಿದ್ಯಾಲಯವು ಸ್ವಾಯತ್ತ (ಡೀಮ್ಸ್‌) ವಿವಿಯಾಗಿದ್ದು, ಆಡಳಿತ ಮಂಡಳಿ ಗಮನಕ್ಕೆ ಬಾರದೇ ಇಂತಹ ಘಟನೆ ನಡೆಯಲು ಸಾಧ್ಯವಿಲ್ಲ. ಉದ್ದೇಶಪೂರ್ವಕವಾಗಿಯೇ ಅವಮಾನ ಮಾಡಲಾಗಿದೆ” ಎಂದು ದೂರಿದರು.

”ಪ್ರಾಧ್ಯಾಪಕರು, ಡೀನ್‍ಗಳು ನೋಡಿದ ನಂತರವೇ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರುತ್ತದೆ. ಜೈನ್ ವಿಶ್ವವಿದ್ಯಾಲಯವನ್ನು ಮುಚ್ಚಬೇಕು’’ ಎಂದು ಪಟ್ಟು ಹಿಡಿದರು. ಅಲ್ಲದೆ, ಈಗಲೇ ಈ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಎದುರು ಧರಣಿಗೆ ಮುಂದಾದರು.

”ಕೋಳಿ ಗೂಡಿನಂತಿರುವ ಜೈನ್ ವಿವಿಗೆ ಸ್ಥಾಯತ್ತ ಸ್ಥಾನ ನೀಡಿದ್ದು ಯಾರು? ಸರಿಯಾಗಿ ಶಿಕ್ಷಣ ನೀಡುವ ಯೋಗ್ಯತೆ ಇಲ್ಲದ ಇಂತಹವರು, ಸಂವಿಧಾನ ಶಿಲ್ಪಿ, ವಿಶ್ವ ನಾಯಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವುದು ಅಕ್ಷಮ್ಯ ಈ ವಿಶ್ವ ವಿದ್ಯಾನಿಲಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಅನ್ನದಾನಿ ಏರು ಧ್ವನಿಯಲ್ಲಿ ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್‌ನ ಯು.ಟಿ. ಖಾದರ್, ”ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಜೈನ್ ವಿಶ್ವವಿದ್ಯಾಲಯದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಆಡಳಿತ ಮಂಡಳಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

”ಜೈನ್‌ ವಿಶ್ವವಿದ್ಯಾಲಯದಲ್ಲಿ ಕಿರುನಾಟಕ ಅಭಿನಯದ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ, ಇದು ಖಂಡನೀಯ. ವಿಶ್ವವಿದ್ಯಾಲಯದ ಡೀಮ್ಡ್ ಮಾನ್ಯತೆ ರದ್ದು ಮಾಡಬೇಕು’’ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ”ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ಈ ಪ್ರಕರಣ ಸಂಬಂಧ ಕೆಲವರನ್ನು ಬಂಧಿಸಿದ್ದು, ಜೈನ್ ವಿವಿ ಮಾನ್ಯತೆ ರದ್ದುಪಡಿಸುವ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು” ಎ೦ದು ಭರವಸೆ ನೀಡಿದ್ದಾರೆ.

ಘಟನೆ ಬಗ್ಗೆ:

ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಸ್ಕಿಟ್‌ ಪ್ರದರ್ಶಿಸಿದ್ದರು. ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸ್ಕಿಟ್‌ನಲ್ಲಿ ವಿದ್ಯಾರ್ಥಿಗಳು ”ಬಿ.ಆರ್.ಅಂಬೇಡ್ಕರ್ ಅಲ್ಲ, ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ಅದರಲ್ಲಿಯ ಪಾತ್ರದಾರಿ ದಲಿತ ಎನ್ನುವ ಕಾರಣಕ್ಕೆ ‘ಡೋಂಟ್‌ ಟಚ್ ಮಿ ಟಚ್ ಮಿ…’ ಎನ್ನುವ ಹಾಡನ್ನು ಹಾಕಿ ದಲಿತರನ್ನು ಅವಮಾನಿಸಿದ್ದಾರೆ. ಅದೇ ರೀತಿ ಕೆಲವು ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಈ ಸ್ಕಿಟ್‌ನ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನ್ ಜೈನ್‌ ಯೂನಿವರ್ಸಿಟಿ (ಜೈನ್ ವಿಶ್ವವಿದ್ಯಾನಿಲಯ ರದ್ದುಗೊಳಿಸಿ) ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿರುವ ಪೋಸ್ಟರ್‌ ವೈರಲ್ ಆಗುತ್ತಿದೆ. ಇದೀಗ ವಿಧಾನಸೌಧದಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...