Homeಕರ್ನಾಟಕಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

ಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

- Advertisement -
- Advertisement -

ಬುಧವಾರ ವಿಧಾನಸಭೆ ಶೂನ್ಯ ವೇಳೆಯಲ್ಲಿ ಡಾ.ಅಂಬೇಡ್ಕರ್‍‌ಗೆ ಜೈನ್ ವಿಶ್ವ ವಿದ್ಯಾನಿಲಯದಲ್ಲಿ ಅಪಮಾನ ಮಾಡಿರುವ ಘಟನೆ ಪ್ರತಿಧ್ವನಿಸಿತು. ವಿಶ್ವವಿದ್ಯಾಲಯದ ಮಾನ್ಯತೆ ರದ್ದು ಮಾಡಬೇಕು ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಜೆಡಿಎಸ್‌ ಸದಸ್ಯ ಕೆ.ಅನ್ನದಾನಿ ವಿಷಯ ಪ್ರಸ್ತಾಪಿಸಿ, ”ಜೈನ್, ವಿಶ್ವವಿದ್ಯಾಲಯವು ಸ್ವಾಯತ್ತ (ಡೀಮ್ಸ್‌) ವಿವಿಯಾಗಿದ್ದು, ಆಡಳಿತ ಮಂಡಳಿ ಗಮನಕ್ಕೆ ಬಾರದೇ ಇಂತಹ ಘಟನೆ ನಡೆಯಲು ಸಾಧ್ಯವಿಲ್ಲ. ಉದ್ದೇಶಪೂರ್ವಕವಾಗಿಯೇ ಅವಮಾನ ಮಾಡಲಾಗಿದೆ” ಎಂದು ದೂರಿದರು.

”ಪ್ರಾಧ್ಯಾಪಕರು, ಡೀನ್‍ಗಳು ನೋಡಿದ ನಂತರವೇ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರುತ್ತದೆ. ಜೈನ್ ವಿಶ್ವವಿದ್ಯಾಲಯವನ್ನು ಮುಚ್ಚಬೇಕು’’ ಎಂದು ಪಟ್ಟು ಹಿಡಿದರು. ಅಲ್ಲದೆ, ಈಗಲೇ ಈ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಎದುರು ಧರಣಿಗೆ ಮುಂದಾದರು.

”ಕೋಳಿ ಗೂಡಿನಂತಿರುವ ಜೈನ್ ವಿವಿಗೆ ಸ್ಥಾಯತ್ತ ಸ್ಥಾನ ನೀಡಿದ್ದು ಯಾರು? ಸರಿಯಾಗಿ ಶಿಕ್ಷಣ ನೀಡುವ ಯೋಗ್ಯತೆ ಇಲ್ಲದ ಇಂತಹವರು, ಸಂವಿಧಾನ ಶಿಲ್ಪಿ, ವಿಶ್ವ ನಾಯಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವುದು ಅಕ್ಷಮ್ಯ ಈ ವಿಶ್ವ ವಿದ್ಯಾನಿಲಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಅನ್ನದಾನಿ ಏರು ಧ್ವನಿಯಲ್ಲಿ ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್‌ನ ಯು.ಟಿ. ಖಾದರ್, ”ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಜೈನ್ ವಿಶ್ವವಿದ್ಯಾಲಯದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಆಡಳಿತ ಮಂಡಳಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

”ಜೈನ್‌ ವಿಶ್ವವಿದ್ಯಾಲಯದಲ್ಲಿ ಕಿರುನಾಟಕ ಅಭಿನಯದ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ, ಇದು ಖಂಡನೀಯ. ವಿಶ್ವವಿದ್ಯಾಲಯದ ಡೀಮ್ಡ್ ಮಾನ್ಯತೆ ರದ್ದು ಮಾಡಬೇಕು’’ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ”ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ಈ ಪ್ರಕರಣ ಸಂಬಂಧ ಕೆಲವರನ್ನು ಬಂಧಿಸಿದ್ದು, ಜೈನ್ ವಿವಿ ಮಾನ್ಯತೆ ರದ್ದುಪಡಿಸುವ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು” ಎ೦ದು ಭರವಸೆ ನೀಡಿದ್ದಾರೆ.

ಘಟನೆ ಬಗ್ಗೆ:

ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಸ್ಕಿಟ್‌ ಪ್ರದರ್ಶಿಸಿದ್ದರು. ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸ್ಕಿಟ್‌ನಲ್ಲಿ ವಿದ್ಯಾರ್ಥಿಗಳು ”ಬಿ.ಆರ್.ಅಂಬೇಡ್ಕರ್ ಅಲ್ಲ, ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ಅದರಲ್ಲಿಯ ಪಾತ್ರದಾರಿ ದಲಿತ ಎನ್ನುವ ಕಾರಣಕ್ಕೆ ‘ಡೋಂಟ್‌ ಟಚ್ ಮಿ ಟಚ್ ಮಿ…’ ಎನ್ನುವ ಹಾಡನ್ನು ಹಾಕಿ ದಲಿತರನ್ನು ಅವಮಾನಿಸಿದ್ದಾರೆ. ಅದೇ ರೀತಿ ಕೆಲವು ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಈ ಸ್ಕಿಟ್‌ನ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನ್ ಜೈನ್‌ ಯೂನಿವರ್ಸಿಟಿ (ಜೈನ್ ವಿಶ್ವವಿದ್ಯಾನಿಲಯ ರದ್ದುಗೊಳಿಸಿ) ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿರುವ ಪೋಸ್ಟರ್‌ ವೈರಲ್ ಆಗುತ್ತಿದೆ. ಇದೀಗ ವಿಧಾನಸೌಧದಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...