Homeಕರ್ನಾಟಕದಲಿತರಿಗೆ ಅವಮಾನ: ಬಂಧನ ಭೀತಿಯಿಂದ ತಲೆಮರಿಸಿಕೊಂಡಿದ್ದಾರಾ ನಟ ಉಪೇಂದ್ರ?

ದಲಿತರಿಗೆ ಅವಮಾನ: ಬಂಧನ ಭೀತಿಯಿಂದ ತಲೆಮರಿಸಿಕೊಂಡಿದ್ದಾರಾ ನಟ ಉಪೇಂದ್ರ?

- Advertisement -
- Advertisement -

ಚಿತ್ರನಟ ಉಪೇಂದ್ರ ಫೇಸ್ಬುಕ್ ವಿಡಿಯೋ ಸಂದೇಶದಲ್ಲಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆ. ಆದರೆ ನಟ ಉಪೇಂದ್ರ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಉಪೇಂದ್ರ ಅವರ ಮನೆಗೆ ಭೇಟಿ ನೀಡಿರುವ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಅಟ್ರಾಸಿಟಿ ಕೇಸ್ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನಟ ಉಪೇಂದ್ರ ಅವರು ನಾಪತ್ತೆಯಾಗಿದ್ದಾರೆ ಎನ್ನುವ ಸುದ್ದಿ ವರದಿಯಾಗುತ್ತಿವೆ.

ಉಪೇಂದ್ರ ಅವರ ಮನೆಗೆ ಪೊಲೀಸರು ನೋಟಿಸ್ ನೀಡಲು ಹೋದಾಗ ಅವರ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಕತ್ರಿಗುಪ್ಪೆ ಹಾಗೂ ಸದಾಶಿವನಗರದಲ್ಲಿರುವ ಎರಡೂ ನಿವಾಸಕ್ಕೂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸ್ನೇಹಿತರು ಹಾಗೂ ಸಂಬಂಧಿಕರ ಸಂಪರ್ಕದಲ್ಲಿರುವ ಉಪೇಂದ್ರ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಟ ಉಪೇಂದ್ರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧನ ಮಾಡುವ ಸಾಧ್ಯತೆ ಇದೆ. ೇಕೆಂದರೆ ಉಪೇಂದ್ರ ವಿರುದ್ಧ ಜಾಮೀನುರಹಿತ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಕೂಡ ಸದ್ಯ ಉಪೇಂದ್ರ ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ.  ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ: ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ಪ್ರಕರಣ ಏನಿದು?

ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, ”ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಉಲ್ಲೇಖಿಸಿ ಮಾತನಾಡಿದ್ದರು.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಹರೀಶ್ ಕುಮಾರ್ ಎಂಬವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದು ಗಾದೆಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...