Homeಮುಖಪುಟಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

- Advertisement -
- Advertisement -

ಗಾಝಾದಲ್ಲಿ 11,000ಕ್ಕೂ ಹೆಚ್ಚು ಜನರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಖಂಡಿಸಿದ್ದು,  ಈ ಸ್ಥಿತಿ ಶೋಚನೀಯವಾಗಿದೆ. ನರಮೇಧವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಈ ನರಮೇಧವನ್ನು ಬೆಂಬಲಿಸುವವರ ಆತ್ಮಸಾಕ್ಷಿಗೆ ಇನ್ನೂ ಯಾವುದೇ ತೊಂದರೆಯಾಗಿಲ್ಲ ಎಂದು ಪ್ರಿಯಾಂಕ ಗಾಂಧಿ ಇದೇ ವೇಳೆ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪ್ರಿಯಾಂಕ ಗಾಂಧಿ, ಎಂತಹ ಶೋಚನಿಯ ಮತ್ತು ಅವಮಾನಕಾರಿ ಬೆಳವಣಿಗೆ, ಗಾಝಾದಲ್ಲಿ 10,000ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು ಅದರಲ್ಲಿ ಅರ್ಧದಷ್ಟು ಮಕ್ಕಳಿದ್ದಾರೆ. WHO ಪ್ರಕಾರ ಪ್ರತಿ 10 ನಿಮಿಷಕ್ಕೆ ಒಂದು ಮಗು ಕೊಲ್ಲಲ್ಪಡುತ್ತಿದೆ ಮತ್ತು ಈಗ ಸಣ್ಣ ಶಿಶುಗಳನ್ನು ಆಮ್ಲಜನಕದ ಕೊರತೆಯಿಂದಾಗಿ ಸಾಯಲು ಬಿಡಲಾಗಿದೆ ಎಂದು ಹೇಳಿದ್ದಾರೆ.

ಈ ನರಮೇಧವನ್ನು ಬೆಂಬಲಿಸುವವರ ಆತ್ಮಸಾಕ್ಷಿಗೆ ಯಾವುದೇ ಆಘಾತವಾಗಿಲ್ಲ, ಕದನ ವಿರಾಮವಿಲ್ಲ,  ಕೇವಲ ಬಾಂಬ್‌ಗಳನ್ನು ಹಾಕಲಾಗುತ್ತಿದೆ, ಹಿಂಸಾಚಾರ ಹೆಚ್ಚಾಗಿದೆ, ಹೆಚ್ಚು ಹತ್ಯೆಗಳು ನಡೆಯುತ್ತಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಗಾಯಗಳಾಗುತ್ತಿದೆ. ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್ ರಾಕೆಟ್‌ ದಾಳಿ ನಡೆಸಿದ ನಂತರ ಇಸ್ರೇಲ್ ಯುದ್ಧ ಘೋಷಿಸಿದೆ. ಯುದ್ಧ 1 ತಿಂಗಳು ಕಳೆದಿದ್ದು, ಗಾಝಾ ಪಟ್ಟಿ ಮೇಲಿನ ಇಸ್ರೇಲ್‌ ಬಾಂಬ್ ದಾಳಿ ಮುಂದುವರಿದಿದೆ.
ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,200 ಜನರು ಮೃತಪಟ್ಟಿದ್ದಾರೆ. 240 ಜನರನ್ನು ಒತ್ತೆಯಾಳುಗಳಾಗಿ ಇಡಲಾಗಿದೆ.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮೃತರ ಸಂಖ್ಯೆ 11,100ಕ್ಕೆ ಏರಿಕೆಯಾಗಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು  ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಇದನ್ನು ಓದಿ:ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...