Homeಮುಖಪುಟಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

- Advertisement -
- Advertisement -

ಗಾಝಾದಲ್ಲಿ 11,000ಕ್ಕೂ ಹೆಚ್ಚು ಜನರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಖಂಡಿಸಿದ್ದು,  ಈ ಸ್ಥಿತಿ ಶೋಚನೀಯವಾಗಿದೆ. ನರಮೇಧವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಈ ನರಮೇಧವನ್ನು ಬೆಂಬಲಿಸುವವರ ಆತ್ಮಸಾಕ್ಷಿಗೆ ಇನ್ನೂ ಯಾವುದೇ ತೊಂದರೆಯಾಗಿಲ್ಲ ಎಂದು ಪ್ರಿಯಾಂಕ ಗಾಂಧಿ ಇದೇ ವೇಳೆ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪ್ರಿಯಾಂಕ ಗಾಂಧಿ, ಎಂತಹ ಶೋಚನಿಯ ಮತ್ತು ಅವಮಾನಕಾರಿ ಬೆಳವಣಿಗೆ, ಗಾಝಾದಲ್ಲಿ 10,000ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು ಅದರಲ್ಲಿ ಅರ್ಧದಷ್ಟು ಮಕ್ಕಳಿದ್ದಾರೆ. WHO ಪ್ರಕಾರ ಪ್ರತಿ 10 ನಿಮಿಷಕ್ಕೆ ಒಂದು ಮಗು ಕೊಲ್ಲಲ್ಪಡುತ್ತಿದೆ ಮತ್ತು ಈಗ ಸಣ್ಣ ಶಿಶುಗಳನ್ನು ಆಮ್ಲಜನಕದ ಕೊರತೆಯಿಂದಾಗಿ ಸಾಯಲು ಬಿಡಲಾಗಿದೆ ಎಂದು ಹೇಳಿದ್ದಾರೆ.

ಈ ನರಮೇಧವನ್ನು ಬೆಂಬಲಿಸುವವರ ಆತ್ಮಸಾಕ್ಷಿಗೆ ಯಾವುದೇ ಆಘಾತವಾಗಿಲ್ಲ, ಕದನ ವಿರಾಮವಿಲ್ಲ,  ಕೇವಲ ಬಾಂಬ್‌ಗಳನ್ನು ಹಾಕಲಾಗುತ್ತಿದೆ, ಹಿಂಸಾಚಾರ ಹೆಚ್ಚಾಗಿದೆ, ಹೆಚ್ಚು ಹತ್ಯೆಗಳು ನಡೆಯುತ್ತಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಗಾಯಗಳಾಗುತ್ತಿದೆ. ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್ ರಾಕೆಟ್‌ ದಾಳಿ ನಡೆಸಿದ ನಂತರ ಇಸ್ರೇಲ್ ಯುದ್ಧ ಘೋಷಿಸಿದೆ. ಯುದ್ಧ 1 ತಿಂಗಳು ಕಳೆದಿದ್ದು, ಗಾಝಾ ಪಟ್ಟಿ ಮೇಲಿನ ಇಸ್ರೇಲ್‌ ಬಾಂಬ್ ದಾಳಿ ಮುಂದುವರಿದಿದೆ.
ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,200 ಜನರು ಮೃತಪಟ್ಟಿದ್ದಾರೆ. 240 ಜನರನ್ನು ಒತ್ತೆಯಾಳುಗಳಾಗಿ ಇಡಲಾಗಿದೆ.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮೃತರ ಸಂಖ್ಯೆ 11,100ಕ್ಕೆ ಏರಿಕೆಯಾಗಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು  ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಇದನ್ನು ಓದಿ:ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...