Homeಮುಖಪುಟಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

- Advertisement -
- Advertisement -

ಗಾಝಾದಲ್ಲಿ 11,000ಕ್ಕೂ ಹೆಚ್ಚು ಜನರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಖಂಡಿಸಿದ್ದು,  ಈ ಸ್ಥಿತಿ ಶೋಚನೀಯವಾಗಿದೆ. ನರಮೇಧವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಈ ನರಮೇಧವನ್ನು ಬೆಂಬಲಿಸುವವರ ಆತ್ಮಸಾಕ್ಷಿಗೆ ಇನ್ನೂ ಯಾವುದೇ ತೊಂದರೆಯಾಗಿಲ್ಲ ಎಂದು ಪ್ರಿಯಾಂಕ ಗಾಂಧಿ ಇದೇ ವೇಳೆ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪ್ರಿಯಾಂಕ ಗಾಂಧಿ, ಎಂತಹ ಶೋಚನಿಯ ಮತ್ತು ಅವಮಾನಕಾರಿ ಬೆಳವಣಿಗೆ, ಗಾಝಾದಲ್ಲಿ 10,000ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು ಅದರಲ್ಲಿ ಅರ್ಧದಷ್ಟು ಮಕ್ಕಳಿದ್ದಾರೆ. WHO ಪ್ರಕಾರ ಪ್ರತಿ 10 ನಿಮಿಷಕ್ಕೆ ಒಂದು ಮಗು ಕೊಲ್ಲಲ್ಪಡುತ್ತಿದೆ ಮತ್ತು ಈಗ ಸಣ್ಣ ಶಿಶುಗಳನ್ನು ಆಮ್ಲಜನಕದ ಕೊರತೆಯಿಂದಾಗಿ ಸಾಯಲು ಬಿಡಲಾಗಿದೆ ಎಂದು ಹೇಳಿದ್ದಾರೆ.

ಈ ನರಮೇಧವನ್ನು ಬೆಂಬಲಿಸುವವರ ಆತ್ಮಸಾಕ್ಷಿಗೆ ಯಾವುದೇ ಆಘಾತವಾಗಿಲ್ಲ, ಕದನ ವಿರಾಮವಿಲ್ಲ,  ಕೇವಲ ಬಾಂಬ್‌ಗಳನ್ನು ಹಾಕಲಾಗುತ್ತಿದೆ, ಹಿಂಸಾಚಾರ ಹೆಚ್ಚಾಗಿದೆ, ಹೆಚ್ಚು ಹತ್ಯೆಗಳು ನಡೆಯುತ್ತಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಗಾಯಗಳಾಗುತ್ತಿದೆ. ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್ ರಾಕೆಟ್‌ ದಾಳಿ ನಡೆಸಿದ ನಂತರ ಇಸ್ರೇಲ್ ಯುದ್ಧ ಘೋಷಿಸಿದೆ. ಯುದ್ಧ 1 ತಿಂಗಳು ಕಳೆದಿದ್ದು, ಗಾಝಾ ಪಟ್ಟಿ ಮೇಲಿನ ಇಸ್ರೇಲ್‌ ಬಾಂಬ್ ದಾಳಿ ಮುಂದುವರಿದಿದೆ.
ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,200 ಜನರು ಮೃತಪಟ್ಟಿದ್ದಾರೆ. 240 ಜನರನ್ನು ಒತ್ತೆಯಾಳುಗಳಾಗಿ ಇಡಲಾಗಿದೆ.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮೃತರ ಸಂಖ್ಯೆ 11,100ಕ್ಕೆ ಏರಿಕೆಯಾಗಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು  ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಇದನ್ನು ಓದಿ:ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...