Homeಕರ್ನಾಟಕಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್‌ಗೆ ಮನವಿ

ಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್‌ಗೆ ಮನವಿ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ.

ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖ ಮಾಡಲಾಗುತ್ತಿತ್ತು. ಈ ಬಗ್ಗೆ ಬೆಂಗಳೂರಿನ ಬಸವನಗುಡಿಯಲ್ಲಿ “ಕಾಫಿ ಶಾಪ್‌” ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್‌ ಶೆಟ್ಟಿ ಅಸಮಾಧಾನ ಹೊಂದಿದ್ದರು.

ಗಣೇಶ್ ಶೆಟ್ಟಿ ಅವರು ಮೂಲ ದಾವೆ ಹೂಡಿದ್ದಾರೆ. ಇವರು ಕುಂದಾಪುರ ಮೂಲದವರಾಗಿದ್ದು,  ದಾವೆಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕುಂದಾಪುರ ಎಂಬುದು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರವನ್ನು ಆಳ್ವಿಕೆ ನಡೆಸಿದ್ದರು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆನಂತರ ಪೋರ್ಚಗೀಸರು , ಟಿಪ್ಪುಸುಲ್ತಾನ್‌, ಬ್ರೀಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಇಂದಿಗೂ ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿದೆ.

ಮಾಧ್ಯಮಗಳು ಚೈತ್ರ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಘಾಸಿಯಾಗುತ್ತಿದೆ. ಕಳೆದ 23 ವರ್ಷಗಳಿಂದ ಬೆಂಗಳೂರಿನ ಬಸನಗುಡಿಯಲ್ಲಿ ಕಾಫಿ ಶಾಪ್‌ ನಡೆಸುತ್ತಿದ್ದೇನೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಗ್ರಾಹಕರು ಶಾಪ್‌ಗೆ ಭೇಟಿ ನೀಡುತ್ತಾರೆ. ಚೈತ್ರಾ ಪ್ರಕರಣ ಬೆಳಕಿಗೆ ಬಂದ ನಂತರ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ನ್ಯಾಯಾಲಯಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.

ವಂಚನೆ ಪ್ರಕರಣದಲ್ಲಿ ಚೈತ್ರಾ ಕುರಿತು ಸುದ್ದಿ ಪ್ರಸಾರ ಮಾಡುವಾಗ ಕುಂದಾಪುರ ಎಂದು ಉಲ್ಲೇಖಿಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ದಾವೆದಾರ ಕೋರಿದ್ದಾರೆ. ದಾವೆದಾರ ಪರ ವಕೀಲ ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ.  ಶುಕ್ರವಾರವಷ್ಟೇ ಈ ದಾವೆ ಹೂಡಿದ್ದಾರೆ. ದಾವೆಯು ಶನಿವಾರ ಅಥವಾ ಸೋಮವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ 10 ದಿನ ಸಿಸಿಬಿ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is stated by Shetty is absolutely correct.Kundapur is a small beautiful town with communal harmony and good business place. Linking this name with a criminal is unwanted and unfortunate.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...