Homeಮುಖಪುಟಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ....!!

ಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ….!!

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು...

- Advertisement -
- Advertisement -

ಏನಿಲ್ಲ ಸಾರ್…
ಬರೀ Dolo 650.. ಕೊರೋನಾದವರಿಗೆ ಅದೇ ಸಾರ್….. ಹೀಗೆಂದು ತಿಂಗಳಿಂದೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಮಾಧ್ಯಮದ ಮುಂದೆ ಬೋಲ್ಡ್ ಆಗಿ ಮಾತನಾಡಿದ ಆ ಹದಿ ಹರೆಯದ ಸಹೋದರಿಯ ಮಾತುಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಗೇಲಿಗೊಳಗಾಗುತ್ತಿವೆ.. ಆಕೆಯ ಮಾತುಗಳಿಗೆ ಮ್ಯೂಸಿಕ್ ಹಾಕಿ ರಿಮಿಕ್ಸ್ ಸಂಗೀತದಂತೆ ಮತ್ತೆ ವೈರಲ್ ಮಾಡಲಾಗುತ್ತಿದೆ..

ದುಡಿವ ಕೈಗಳಿಗೆ ಉದ್ಯೋಗವಿಲ್ಲದ್ದರ ಬಗ್ಗೆ, ಹಸಿದ ಹೊಟ್ಟೆಗಳಿಗೆ ಅನ್ನವಿಲ್ಲದ್ದರ ಬಗ್ಗೆ, ನಾಡ ಜನತೆಯ ಬೇನೆಗೆ ಸೂಕ್ತ ಔಷಧಿ ನೀಡಲಾಗದ ಷಂಡ ಪ್ರಭುತ್ವದ ವಿರುದ್ಧ ಆಕೆ ಮಾತನಾಡಿದ್ದಾಳೆ. ಆಕೆಗೆ ನಿಮ್ಮಂತಹ ಟಾಕು, ಟೀಕಿನ ಇಂಗ್ಲಿಷ್ ಮಿಶ್ರಿತ ಕನ್ನಡವನ್ನು ವಯ್ಯಾರದಿಂದ ಮಾತನಾಡಲು ಬಾರದಿರಬಹುದು. ಆಕೆ ತನ್ನ ಆಡುಭಾಷೆಯಲ್ಲೇ ಪ್ರಭುತ್ವದ ಕ್ರೌರ್ಯವನ್ನು ಪ್ರಶ್ನೆ ಮಾಡಿದ್ದಾಳೆ. ಆ ಮೂಲಕ ಆಕೆ ಸಮಸ್ತ ಅಸಹಾಯಕ ಕನ್ನಡಿಗರ ನೋವಿಗೆ ಧ್ವನಿಯಾಗಿದ್ದಾಳೆ.

ಆಕೆ ಆ ರೀತಿ ತನ್ನದೇ ದಾಟಿಯಲ್ಲಿ ತನ್ನ ಸಿಟ್ಟನ್ನು, ತನ್ನ ಅಸಹಾಯಕತೆಯನ್ನು ಮಾಧ್ಯಮಗಳ ಮುಂದೆ ಹೊರಗೆಡಹಿದ್ದಾಳೆ.. ನೀವು ಗೇಲಿ ಮಾಡಬೇಕಿದ್ದು ನನ್ನ ಆ ಸಹೋದರಿಯ ಗ್ರಾಮ್ಯ ಭಾಷೆಯನ್ನಲ್ಲ, ಅವಳ ಆಂಗಿಕ ಚಲನೆಯನ್ನಲ್ಲ… ಯಾವ ಪ್ರಭುತ್ವ, ಯಾವ ವ್ಯವಸ್ಥೆ ಆಕೆಯನ್ನು ಅಂತಹ ಮಾತುಗಳನ್ನಾಡಲು ಅಸಹಾಯಕಳಾಗಿಸಿತೋ ಆ ಪ್ರಭುತ್ವ , ಆ ವ್ಯವಸ್ಥೆಯನ್ನು ನೀವು ಗೇಲಿ ಮಾಡಬೇಕಿತ್ತು.

ಓರ್ವ ದುಷ್ಟ ರಾಜಕಾರಣಿಯನ್ನು ಗೇಲಿ ಮಾಡುವಂತೆ ನೀವು ಆ ಅಸಹಾಯಕ ಹೆಣ್ಮಗಳನ್ನು ಗೇಲಿ ಮಾಡುತ್ತಿದ್ದೀರಿ.. ಅದನ್ನು ಪ್ರಶ್ನಿಸಿದರೆ ಆಕೆಗೆ ಒಳ್ಳೆಯ ಪ್ರಚಾರ ಸಿಕ್ಕಿತಲ್ಲಾ ಎಂದು ಮತ್ತೆ ವ್ಯಂಗ್ಯವಾಡುತ್ತಿದ್ದೀರಿ.. ಆಕೆಯ ಪರವಾಗಿ ಧ್ವನಿಯೆತ್ತಲು ನ್ಯಾಯಾಂಗದಲ್ಲೋ, ಕಾರ್ಯಾಂಗದಲ್ಲೋ, ಶಾಸಕಾಂಗದಲ್ಲೋ ಯಾರೂ ಇಲ್ಲ ಎಂಬುವುದು ನಿಮ್ಮ ಈ ಧೈರ್ಯಕ್ಕೆ ಕಾರಣವಾಗಿದ್ದರೆ ಅವಳ ಪರವಾಗಿ ಧ್ವನಿಯೆತ್ತಲು ಮಾನವೀಯ ಸಂವೇದನೆಯಿರುವ ನಾವಿದ್ದೇವೆ.

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ನೀವು ವ್ಯಂಗ್ಯ ಮಾಡಿದ್ದು ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು…

ಹೃದಯ ಸತ್ತ ನಿಮ್ಮಂತವರ ದಾರ್ಷ್ಟ್ಯಕ್ಕೆ ನನ್ನದೊಂದು ಧಿಕ್ಕಾರ…

ಇಸ್ಮತ್ ಪಜೀರ್


ಇದನ್ನೂ ಓದಿ; ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರಪ್ಪ ಹಂಗಿಸಿದ್ದು. ಅದು ಮೈಸೂರು ಭಾಗದ ಭಾಷೆ, ಉತ್ತರ ಕರ್ನಾಟಕದ್ದಲ್ಲ. ವೈರಲ್ ಆಗಿರುವುದು ಆ ಹುಡುಗಿಯ ಮಾತಿನ ಲಾಲಿತ್ಯದಿಂದ, ವೈರಲ್ ಮಾಡಿದವರಾರೂ ಅವರನ್ನು ಆಡಿಕೊಂಡಿಲ್ಲ. ಮೆಚ್ಚುಗೆಯಿಂದ ವಿವಿಧ ರೀತಿಯಲ್ಲಿ ತೋರಿಸಿದ್ದಾರೆ. ಕೊಳಕು ಮನಸ್ಸಿನ, ನಕಾರಾತ್ಮಕ‌ ಧೋರಣೆಯ, ಜನರ ಕಷ್ಟವನ್ನೆ ಬಂಡವಾಳ ಮಾಡಿಕೊಂಡು ಹೊಟ್ಟೆ ಹೊರೆಯುವ ನಿಮ್ಮಂತವರಷ್ಟೆ ಅವರ ವಿಡಿಯೊಗಳನ್ನು ಸಹ ಹೊಟ್ಟೆಪಾಡಿಗೆ ಬಳಸಿಕೊಂಡು ಈ ರೀತಿ ಪೋಸ್ಟ್ ಮಾಡಿರುವುದು

  2. ಆಹಾ… ಇವನ ಪ್ರೀತಿ ನೋಡ…
    ಹಸಿವಿನ ಕಾಠಿಣ್ಯವರಿಯದ ನಿನ್ನಂತವರಿಗೆ ಭಾಷೆಯ ಲಾಲಿತ್ಯವನ್ನು ಕೊಂಡಾಡಿದಂತೆ ಕಾಣುತ್ತೆ ಬಿಡು..

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...