Homeಮುಖಪುಟಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ....!!

ಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ….!!

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು...

- Advertisement -
- Advertisement -

ಏನಿಲ್ಲ ಸಾರ್…
ಬರೀ Dolo 650.. ಕೊರೋನಾದವರಿಗೆ ಅದೇ ಸಾರ್….. ಹೀಗೆಂದು ತಿಂಗಳಿಂದೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಮಾಧ್ಯಮದ ಮುಂದೆ ಬೋಲ್ಡ್ ಆಗಿ ಮಾತನಾಡಿದ ಆ ಹದಿ ಹರೆಯದ ಸಹೋದರಿಯ ಮಾತುಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಗೇಲಿಗೊಳಗಾಗುತ್ತಿವೆ.. ಆಕೆಯ ಮಾತುಗಳಿಗೆ ಮ್ಯೂಸಿಕ್ ಹಾಕಿ ರಿಮಿಕ್ಸ್ ಸಂಗೀತದಂತೆ ಮತ್ತೆ ವೈರಲ್ ಮಾಡಲಾಗುತ್ತಿದೆ..

ದುಡಿವ ಕೈಗಳಿಗೆ ಉದ್ಯೋಗವಿಲ್ಲದ್ದರ ಬಗ್ಗೆ, ಹಸಿದ ಹೊಟ್ಟೆಗಳಿಗೆ ಅನ್ನವಿಲ್ಲದ್ದರ ಬಗ್ಗೆ, ನಾಡ ಜನತೆಯ ಬೇನೆಗೆ ಸೂಕ್ತ ಔಷಧಿ ನೀಡಲಾಗದ ಷಂಡ ಪ್ರಭುತ್ವದ ವಿರುದ್ಧ ಆಕೆ ಮಾತನಾಡಿದ್ದಾಳೆ. ಆಕೆಗೆ ನಿಮ್ಮಂತಹ ಟಾಕು, ಟೀಕಿನ ಇಂಗ್ಲಿಷ್ ಮಿಶ್ರಿತ ಕನ್ನಡವನ್ನು ವಯ್ಯಾರದಿಂದ ಮಾತನಾಡಲು ಬಾರದಿರಬಹುದು. ಆಕೆ ತನ್ನ ಆಡುಭಾಷೆಯಲ್ಲೇ ಪ್ರಭುತ್ವದ ಕ್ರೌರ್ಯವನ್ನು ಪ್ರಶ್ನೆ ಮಾಡಿದ್ದಾಳೆ. ಆ ಮೂಲಕ ಆಕೆ ಸಮಸ್ತ ಅಸಹಾಯಕ ಕನ್ನಡಿಗರ ನೋವಿಗೆ ಧ್ವನಿಯಾಗಿದ್ದಾಳೆ.

ಆಕೆ ಆ ರೀತಿ ತನ್ನದೇ ದಾಟಿಯಲ್ಲಿ ತನ್ನ ಸಿಟ್ಟನ್ನು, ತನ್ನ ಅಸಹಾಯಕತೆಯನ್ನು ಮಾಧ್ಯಮಗಳ ಮುಂದೆ ಹೊರಗೆಡಹಿದ್ದಾಳೆ.. ನೀವು ಗೇಲಿ ಮಾಡಬೇಕಿದ್ದು ನನ್ನ ಆ ಸಹೋದರಿಯ ಗ್ರಾಮ್ಯ ಭಾಷೆಯನ್ನಲ್ಲ, ಅವಳ ಆಂಗಿಕ ಚಲನೆಯನ್ನಲ್ಲ… ಯಾವ ಪ್ರಭುತ್ವ, ಯಾವ ವ್ಯವಸ್ಥೆ ಆಕೆಯನ್ನು ಅಂತಹ ಮಾತುಗಳನ್ನಾಡಲು ಅಸಹಾಯಕಳಾಗಿಸಿತೋ ಆ ಪ್ರಭುತ್ವ , ಆ ವ್ಯವಸ್ಥೆಯನ್ನು ನೀವು ಗೇಲಿ ಮಾಡಬೇಕಿತ್ತು.

ಓರ್ವ ದುಷ್ಟ ರಾಜಕಾರಣಿಯನ್ನು ಗೇಲಿ ಮಾಡುವಂತೆ ನೀವು ಆ ಅಸಹಾಯಕ ಹೆಣ್ಮಗಳನ್ನು ಗೇಲಿ ಮಾಡುತ್ತಿದ್ದೀರಿ.. ಅದನ್ನು ಪ್ರಶ್ನಿಸಿದರೆ ಆಕೆಗೆ ಒಳ್ಳೆಯ ಪ್ರಚಾರ ಸಿಕ್ಕಿತಲ್ಲಾ ಎಂದು ಮತ್ತೆ ವ್ಯಂಗ್ಯವಾಡುತ್ತಿದ್ದೀರಿ.. ಆಕೆಯ ಪರವಾಗಿ ಧ್ವನಿಯೆತ್ತಲು ನ್ಯಾಯಾಂಗದಲ್ಲೋ, ಕಾರ್ಯಾಂಗದಲ್ಲೋ, ಶಾಸಕಾಂಗದಲ್ಲೋ ಯಾರೂ ಇಲ್ಲ ಎಂಬುವುದು ನಿಮ್ಮ ಈ ಧೈರ್ಯಕ್ಕೆ ಕಾರಣವಾಗಿದ್ದರೆ ಅವಳ ಪರವಾಗಿ ಧ್ವನಿಯೆತ್ತಲು ಮಾನವೀಯ ಸಂವೇದನೆಯಿರುವ ನಾವಿದ್ದೇವೆ.

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ನೀವು ವ್ಯಂಗ್ಯ ಮಾಡಿದ್ದು ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು…

ಹೃದಯ ಸತ್ತ ನಿಮ್ಮಂತವರ ದಾರ್ಷ್ಟ್ಯಕ್ಕೆ ನನ್ನದೊಂದು ಧಿಕ್ಕಾರ…

ಇಸ್ಮತ್ ಪಜೀರ್


ಇದನ್ನೂ ಓದಿ; ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರಪ್ಪ ಹಂಗಿಸಿದ್ದು. ಅದು ಮೈಸೂರು ಭಾಗದ ಭಾಷೆ, ಉತ್ತರ ಕರ್ನಾಟಕದ್ದಲ್ಲ. ವೈರಲ್ ಆಗಿರುವುದು ಆ ಹುಡುಗಿಯ ಮಾತಿನ ಲಾಲಿತ್ಯದಿಂದ, ವೈರಲ್ ಮಾಡಿದವರಾರೂ ಅವರನ್ನು ಆಡಿಕೊಂಡಿಲ್ಲ. ಮೆಚ್ಚುಗೆಯಿಂದ ವಿವಿಧ ರೀತಿಯಲ್ಲಿ ತೋರಿಸಿದ್ದಾರೆ. ಕೊಳಕು ಮನಸ್ಸಿನ, ನಕಾರಾತ್ಮಕ‌ ಧೋರಣೆಯ, ಜನರ ಕಷ್ಟವನ್ನೆ ಬಂಡವಾಳ ಮಾಡಿಕೊಂಡು ಹೊಟ್ಟೆ ಹೊರೆಯುವ ನಿಮ್ಮಂತವರಷ್ಟೆ ಅವರ ವಿಡಿಯೊಗಳನ್ನು ಸಹ ಹೊಟ್ಟೆಪಾಡಿಗೆ ಬಳಸಿಕೊಂಡು ಈ ರೀತಿ ಪೋಸ್ಟ್ ಮಾಡಿರುವುದು

  2. ಆಹಾ… ಇವನ ಪ್ರೀತಿ ನೋಡ…
    ಹಸಿವಿನ ಕಾಠಿಣ್ಯವರಿಯದ ನಿನ್ನಂತವರಿಗೆ ಭಾಷೆಯ ಲಾಲಿತ್ಯವನ್ನು ಕೊಂಡಾಡಿದಂತೆ ಕಾಣುತ್ತೆ ಬಿಡು..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...