Homeಮುಖಪುಟಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ....!!

ಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ….!!

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು...

- Advertisement -
- Advertisement -

ಏನಿಲ್ಲ ಸಾರ್…
ಬರೀ Dolo 650.. ಕೊರೋನಾದವರಿಗೆ ಅದೇ ಸಾರ್….. ಹೀಗೆಂದು ತಿಂಗಳಿಂದೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಮಾಧ್ಯಮದ ಮುಂದೆ ಬೋಲ್ಡ್ ಆಗಿ ಮಾತನಾಡಿದ ಆ ಹದಿ ಹರೆಯದ ಸಹೋದರಿಯ ಮಾತುಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಗೇಲಿಗೊಳಗಾಗುತ್ತಿವೆ.. ಆಕೆಯ ಮಾತುಗಳಿಗೆ ಮ್ಯೂಸಿಕ್ ಹಾಕಿ ರಿಮಿಕ್ಸ್ ಸಂಗೀತದಂತೆ ಮತ್ತೆ ವೈರಲ್ ಮಾಡಲಾಗುತ್ತಿದೆ..

ದುಡಿವ ಕೈಗಳಿಗೆ ಉದ್ಯೋಗವಿಲ್ಲದ್ದರ ಬಗ್ಗೆ, ಹಸಿದ ಹೊಟ್ಟೆಗಳಿಗೆ ಅನ್ನವಿಲ್ಲದ್ದರ ಬಗ್ಗೆ, ನಾಡ ಜನತೆಯ ಬೇನೆಗೆ ಸೂಕ್ತ ಔಷಧಿ ನೀಡಲಾಗದ ಷಂಡ ಪ್ರಭುತ್ವದ ವಿರುದ್ಧ ಆಕೆ ಮಾತನಾಡಿದ್ದಾಳೆ. ಆಕೆಗೆ ನಿಮ್ಮಂತಹ ಟಾಕು, ಟೀಕಿನ ಇಂಗ್ಲಿಷ್ ಮಿಶ್ರಿತ ಕನ್ನಡವನ್ನು ವಯ್ಯಾರದಿಂದ ಮಾತನಾಡಲು ಬಾರದಿರಬಹುದು. ಆಕೆ ತನ್ನ ಆಡುಭಾಷೆಯಲ್ಲೇ ಪ್ರಭುತ್ವದ ಕ್ರೌರ್ಯವನ್ನು ಪ್ರಶ್ನೆ ಮಾಡಿದ್ದಾಳೆ. ಆ ಮೂಲಕ ಆಕೆ ಸಮಸ್ತ ಅಸಹಾಯಕ ಕನ್ನಡಿಗರ ನೋವಿಗೆ ಧ್ವನಿಯಾಗಿದ್ದಾಳೆ.

ಆಕೆ ಆ ರೀತಿ ತನ್ನದೇ ದಾಟಿಯಲ್ಲಿ ತನ್ನ ಸಿಟ್ಟನ್ನು, ತನ್ನ ಅಸಹಾಯಕತೆಯನ್ನು ಮಾಧ್ಯಮಗಳ ಮುಂದೆ ಹೊರಗೆಡಹಿದ್ದಾಳೆ.. ನೀವು ಗೇಲಿ ಮಾಡಬೇಕಿದ್ದು ನನ್ನ ಆ ಸಹೋದರಿಯ ಗ್ರಾಮ್ಯ ಭಾಷೆಯನ್ನಲ್ಲ, ಅವಳ ಆಂಗಿಕ ಚಲನೆಯನ್ನಲ್ಲ… ಯಾವ ಪ್ರಭುತ್ವ, ಯಾವ ವ್ಯವಸ್ಥೆ ಆಕೆಯನ್ನು ಅಂತಹ ಮಾತುಗಳನ್ನಾಡಲು ಅಸಹಾಯಕಳಾಗಿಸಿತೋ ಆ ಪ್ರಭುತ್ವ , ಆ ವ್ಯವಸ್ಥೆಯನ್ನು ನೀವು ಗೇಲಿ ಮಾಡಬೇಕಿತ್ತು.

ಓರ್ವ ದುಷ್ಟ ರಾಜಕಾರಣಿಯನ್ನು ಗೇಲಿ ಮಾಡುವಂತೆ ನೀವು ಆ ಅಸಹಾಯಕ ಹೆಣ್ಮಗಳನ್ನು ಗೇಲಿ ಮಾಡುತ್ತಿದ್ದೀರಿ.. ಅದನ್ನು ಪ್ರಶ್ನಿಸಿದರೆ ಆಕೆಗೆ ಒಳ್ಳೆಯ ಪ್ರಚಾರ ಸಿಕ್ಕಿತಲ್ಲಾ ಎಂದು ಮತ್ತೆ ವ್ಯಂಗ್ಯವಾಡುತ್ತಿದ್ದೀರಿ.. ಆಕೆಯ ಪರವಾಗಿ ಧ್ವನಿಯೆತ್ತಲು ನ್ಯಾಯಾಂಗದಲ್ಲೋ, ಕಾರ್ಯಾಂಗದಲ್ಲೋ, ಶಾಸಕಾಂಗದಲ್ಲೋ ಯಾರೂ ಇಲ್ಲ ಎಂಬುವುದು ನಿಮ್ಮ ಈ ಧೈರ್ಯಕ್ಕೆ ಕಾರಣವಾಗಿದ್ದರೆ ಅವಳ ಪರವಾಗಿ ಧ್ವನಿಯೆತ್ತಲು ಮಾನವೀಯ ಸಂವೇದನೆಯಿರುವ ನಾವಿದ್ದೇವೆ.

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ನೀವು ವ್ಯಂಗ್ಯ ಮಾಡಿದ್ದು ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು…

ಹೃದಯ ಸತ್ತ ನಿಮ್ಮಂತವರ ದಾರ್ಷ್ಟ್ಯಕ್ಕೆ ನನ್ನದೊಂದು ಧಿಕ್ಕಾರ…

ಇಸ್ಮತ್ ಪಜೀರ್


ಇದನ್ನೂ ಓದಿ; ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರಪ್ಪ ಹಂಗಿಸಿದ್ದು. ಅದು ಮೈಸೂರು ಭಾಗದ ಭಾಷೆ, ಉತ್ತರ ಕರ್ನಾಟಕದ್ದಲ್ಲ. ವೈರಲ್ ಆಗಿರುವುದು ಆ ಹುಡುಗಿಯ ಮಾತಿನ ಲಾಲಿತ್ಯದಿಂದ, ವೈರಲ್ ಮಾಡಿದವರಾರೂ ಅವರನ್ನು ಆಡಿಕೊಂಡಿಲ್ಲ. ಮೆಚ್ಚುಗೆಯಿಂದ ವಿವಿಧ ರೀತಿಯಲ್ಲಿ ತೋರಿಸಿದ್ದಾರೆ. ಕೊಳಕು ಮನಸ್ಸಿನ, ನಕಾರಾತ್ಮಕ‌ ಧೋರಣೆಯ, ಜನರ ಕಷ್ಟವನ್ನೆ ಬಂಡವಾಳ ಮಾಡಿಕೊಂಡು ಹೊಟ್ಟೆ ಹೊರೆಯುವ ನಿಮ್ಮಂತವರಷ್ಟೆ ಅವರ ವಿಡಿಯೊಗಳನ್ನು ಸಹ ಹೊಟ್ಟೆಪಾಡಿಗೆ ಬಳಸಿಕೊಂಡು ಈ ರೀತಿ ಪೋಸ್ಟ್ ಮಾಡಿರುವುದು

  2. ಆಹಾ… ಇವನ ಪ್ರೀತಿ ನೋಡ…
    ಹಸಿವಿನ ಕಾಠಿಣ್ಯವರಿಯದ ನಿನ್ನಂತವರಿಗೆ ಭಾಷೆಯ ಲಾಲಿತ್ಯವನ್ನು ಕೊಂಡಾಡಿದಂತೆ ಕಾಣುತ್ತೆ ಬಿಡು..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....