Homeಮುಖಪುಟನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಟಕೋತ್ಸವದ ವಿಶೇಷ ಎಂದರೆ "ನಾಗರಕಟ್ಟೆ". ಈ ಕಾರ್ಯಕ್ರಮದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

- Advertisement -
- Advertisement -

2018ರಿಂದ ಖ್ಯಾತನಟ, ನಿರ್ದೇಶಕ ಶಂಕರ್‌ ನಾಗ್ ನೆನಪಲ್ಲಿ ಪ್ರತಿವರ್ಷದ ಪರಮ ಗುರಿ ಎಂದು ಶಂಕರ್‌ ನಾಗ್ ನಾಟಕೋತ್ಸವ ನಡೆಸುತ್ತಿರುವ ಸಾತ್ವಿಕ ಮತ್ತು ರಂಗಪಯಣ ತಂಡ ಮತ್ತೊಂದು ನಾಟಕೋತ್ಸವಕ್ಕೆ ಸಜ್ಜಾಗಿ, ಕಲಾ ಪ್ರೇಮಿಗಳನ್ನು ಸ್ವಾಗತಿಸುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ ಅವರ ಈ ತಂಡಗಳು 2018ರಿಂದ ವಿಶಿಷ್ಟವಾಗಿ ಶಂಕರ್‌ ನಾಗ್ ಅವರ ನೆನಪನ್ನು ಮತ್ತಷ್ಟು ಹಚ್ಚಹಸಿರುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್‌ 23 ರಿಂದ 26 ರವರೆಗೆ ನಾಲ್ಕು ದಿನಗಳು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ.

ಪ್ರತಿ ವರ್ಷದ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಕೊರೊನಾ ಕಾರಣದಿಂದ ನವೆಂಬರ್‌ನಲ್ಲಿ ನಡೆಯುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ

ಈ ನಾಟಕೋತ್ಸವದಲ್ಲಿ ಬರೀ ನಾಟಕಗಳಷ್ಟೇ ಅಲ್ಲದೆ, ಸಾಹಿತ್ಯ, ಸಂಗೀತ, ಮಹಿಳೆ ಮತ್ತು ರಂಗಭೂಮಿ, ವಿಚಾರ ಸಂಕೀರ್ಣ, ನಿರ್ದೇಶಕರೊಂದಿಗೆ ಸಂವಾದಗಳು ಸೇರಿದಂತೆ ಹತ್ತಾರ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ’ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ಹೆಚ್ಚು ಪ್ರಯೋಗಾತ್ಮಕ ಮತ್ತು ಮಹಿಳಾ ಪ್ರಧಾನ ನಾಟಕಗಳನ್ನು ಈ ತಂಡಗಳು ಪ್ರಸ್ತುತ ಪಡಿಸಿವೆ. ಈ ಬಾರಿಯ ಶಂಕರ್ ನಾಗ್ ನಾಟಕೋತ್ಸವದ ಉದ್ಘಾಟನೆಯನ್ನು ಮಹಿಳಾ ನಿರ್ದೇಶಕಿಯರು ಮಾಡಲಿದ್ದಾರೆ. ಪ್ರತಿ ದಿನ ಸಂಜೆ 5.30 ರಿಂದ ಕಾರ್ಯಕ್ರಮಗಳು ಆರಂಭವಾಗಲಿವೆ.

ನವೆಂಬರ್ 23 ರಂದು ಸಂಜೆ ಜಾನ್ ದೇವರಾಜು ಅವರಿಂದ ’ಬ್ಲ್ಯಾಕ್ &ವೈಟ್’, ಬಾಲು ಜಂಬೆ ತಂಡದಿಂದ ’ರಿದಂ’ ಸಾತ್ವಿಕ ರಂಗತಂಡದಿಂದ ’ಸೂಫಿ ನಡಿಗೆ ತತ್ವಪದದೆಡೆಗೆ’ ಎಂಬ ಕಾರ್ಯಕ್ರಮಗಳು ನಡೆಯಲಿವೆ.

ನವೆಂಬರ್‌ 24 ರಂದು ಸಂಜೆ 5.30ಕ್ಕೆ ಲಂಕೇಶ್ ಅವರ ವಿಚಾರಗಳು ಮತ್ತು ನಾವು ಎಂಬ ವಿಚಾರಗೋಷ್ಠಿ ನಡೆಯಲಿದೆ. ನಾಗರಕಟ್ಟೆ ಮತ್ತು ಸಂಜೆ 7.45ಕ್ಕೆ ಶ್ರದ್ಧಾ ನಾಟಕ ಆರಂಭವಾಗಲಿದೆ.

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!
PC:Nayana sooda

ನವೆಂಬರ್‌ 25 ರಂದು ’ಬದುಕು ಕಲಿಸಿದ ಬೇಂದ್ರೆ’ ವಿಚಾರಗೋಷ್ಠಿ, ನಾಗರಕಟ್ಟೆ ಮತ್ತು ’ಸೋಮಾಲಿಯಾ ಕಡಲ್ಗಳ್ಳರು’ ಎಂಬ ನಾಟಕ ನಡೆಯಲಿದೆ.

ನವೆಂಬರ್‌ 26 ರಂದು ಶಂಕರ್‌ ನಾಗ್ ಅಭಿನಯಿಸಿದ್ದ ನಾಟಕಗಳ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜೊತೆಗೆ ಶಂಕರ್‌ ನಾಗ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವುಗಳ ನಂತರ 8 ಗಂಟೆಗೆ ಬಿದ್ದರೂರಿನ ಬಿಗ್‌ಬೆನ್ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾಟಕೋತ್ಸವದ ವಿಶೇಷ ಎಂದರೆ “ನಾಗರಕಟ್ಟೆ”. ಈ ಕಾರ್ಯಕ್ರಮದಲ್ಲಿ ಶಂಕರ್‌ ನಾಗ್ ಅವರ ನೆನಪುಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಕ್ರದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು, ಒಡನಾಡಿಗಳು, ಅವರ ಪರಿಚಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” –  ರಾಜ್‌ಗುರು, ರಂಗಕರ್ಮಿ

ನಾಟಕೋತ್ಸವದ ಸಿದ್ಧತೆಯಲ್ಲಿ ರಂಗತಂಡದ ಸದಸ್ಯರು

“ನಾಟಕೋತ್ಸವದಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ನಾಟಕೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ, ಹಾಗಾಗಿಯೇ ಪಾಸ್‌ಗಳನ್ನು ವಿತರಿಸಲಾಗಿದೆ. ಮಾಸ್ಕ್, ದೈಹಿಕ ಅಂತರ ಕಡ್ಡಾಯ” ಎಂದು ನಾಟಕೋತ್ಸವದ ನಿರ್ವಹಣೆ ನೋಡಿಕೊಳ್ಳುತ್ತಿರುವ ರಂಗಕರ್ಮಿ ನಯನ ಸೂಡ ತಿಳಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....