Homeಮುಖಪುಟನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಟಕೋತ್ಸವದ ವಿಶೇಷ ಎಂದರೆ "ನಾಗರಕಟ್ಟೆ". ಈ ಕಾರ್ಯಕ್ರಮದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

- Advertisement -
- Advertisement -

2018ರಿಂದ ಖ್ಯಾತನಟ, ನಿರ್ದೇಶಕ ಶಂಕರ್‌ ನಾಗ್ ನೆನಪಲ್ಲಿ ಪ್ರತಿವರ್ಷದ ಪರಮ ಗುರಿ ಎಂದು ಶಂಕರ್‌ ನಾಗ್ ನಾಟಕೋತ್ಸವ ನಡೆಸುತ್ತಿರುವ ಸಾತ್ವಿಕ ಮತ್ತು ರಂಗಪಯಣ ತಂಡ ಮತ್ತೊಂದು ನಾಟಕೋತ್ಸವಕ್ಕೆ ಸಜ್ಜಾಗಿ, ಕಲಾ ಪ್ರೇಮಿಗಳನ್ನು ಸ್ವಾಗತಿಸುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ ಅವರ ಈ ತಂಡಗಳು 2018ರಿಂದ ವಿಶಿಷ್ಟವಾಗಿ ಶಂಕರ್‌ ನಾಗ್ ಅವರ ನೆನಪನ್ನು ಮತ್ತಷ್ಟು ಹಚ್ಚಹಸಿರುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್‌ 23 ರಿಂದ 26 ರವರೆಗೆ ನಾಲ್ಕು ದಿನಗಳು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ.

ಪ್ರತಿ ವರ್ಷದ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಕೊರೊನಾ ಕಾರಣದಿಂದ ನವೆಂಬರ್‌ನಲ್ಲಿ ನಡೆಯುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ

ಈ ನಾಟಕೋತ್ಸವದಲ್ಲಿ ಬರೀ ನಾಟಕಗಳಷ್ಟೇ ಅಲ್ಲದೆ, ಸಾಹಿತ್ಯ, ಸಂಗೀತ, ಮಹಿಳೆ ಮತ್ತು ರಂಗಭೂಮಿ, ವಿಚಾರ ಸಂಕೀರ್ಣ, ನಿರ್ದೇಶಕರೊಂದಿಗೆ ಸಂವಾದಗಳು ಸೇರಿದಂತೆ ಹತ್ತಾರ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ’ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ಹೆಚ್ಚು ಪ್ರಯೋಗಾತ್ಮಕ ಮತ್ತು ಮಹಿಳಾ ಪ್ರಧಾನ ನಾಟಕಗಳನ್ನು ಈ ತಂಡಗಳು ಪ್ರಸ್ತುತ ಪಡಿಸಿವೆ. ಈ ಬಾರಿಯ ಶಂಕರ್ ನಾಗ್ ನಾಟಕೋತ್ಸವದ ಉದ್ಘಾಟನೆಯನ್ನು ಮಹಿಳಾ ನಿರ್ದೇಶಕಿಯರು ಮಾಡಲಿದ್ದಾರೆ. ಪ್ರತಿ ದಿನ ಸಂಜೆ 5.30 ರಿಂದ ಕಾರ್ಯಕ್ರಮಗಳು ಆರಂಭವಾಗಲಿವೆ.

ನವೆಂಬರ್ 23 ರಂದು ಸಂಜೆ ಜಾನ್ ದೇವರಾಜು ಅವರಿಂದ ’ಬ್ಲ್ಯಾಕ್ &ವೈಟ್’, ಬಾಲು ಜಂಬೆ ತಂಡದಿಂದ ’ರಿದಂ’ ಸಾತ್ವಿಕ ರಂಗತಂಡದಿಂದ ’ಸೂಫಿ ನಡಿಗೆ ತತ್ವಪದದೆಡೆಗೆ’ ಎಂಬ ಕಾರ್ಯಕ್ರಮಗಳು ನಡೆಯಲಿವೆ.

ನವೆಂಬರ್‌ 24 ರಂದು ಸಂಜೆ 5.30ಕ್ಕೆ ಲಂಕೇಶ್ ಅವರ ವಿಚಾರಗಳು ಮತ್ತು ನಾವು ಎಂಬ ವಿಚಾರಗೋಷ್ಠಿ ನಡೆಯಲಿದೆ. ನಾಗರಕಟ್ಟೆ ಮತ್ತು ಸಂಜೆ 7.45ಕ್ಕೆ ಶ್ರದ್ಧಾ ನಾಟಕ ಆರಂಭವಾಗಲಿದೆ.

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!
PC:Nayana sooda

ನವೆಂಬರ್‌ 25 ರಂದು ’ಬದುಕು ಕಲಿಸಿದ ಬೇಂದ್ರೆ’ ವಿಚಾರಗೋಷ್ಠಿ, ನಾಗರಕಟ್ಟೆ ಮತ್ತು ’ಸೋಮಾಲಿಯಾ ಕಡಲ್ಗಳ್ಳರು’ ಎಂಬ ನಾಟಕ ನಡೆಯಲಿದೆ.

ನವೆಂಬರ್‌ 26 ರಂದು ಶಂಕರ್‌ ನಾಗ್ ಅಭಿನಯಿಸಿದ್ದ ನಾಟಕಗಳ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜೊತೆಗೆ ಶಂಕರ್‌ ನಾಗ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವುಗಳ ನಂತರ 8 ಗಂಟೆಗೆ ಬಿದ್ದರೂರಿನ ಬಿಗ್‌ಬೆನ್ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾಟಕೋತ್ಸವದ ವಿಶೇಷ ಎಂದರೆ “ನಾಗರಕಟ್ಟೆ”. ಈ ಕಾರ್ಯಕ್ರಮದಲ್ಲಿ ಶಂಕರ್‌ ನಾಗ್ ಅವರ ನೆನಪುಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಕ್ರದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು, ಒಡನಾಡಿಗಳು, ಅವರ ಪರಿಚಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” –  ರಾಜ್‌ಗುರು, ರಂಗಕರ್ಮಿ

ನಾಟಕೋತ್ಸವದ ಸಿದ್ಧತೆಯಲ್ಲಿ ರಂಗತಂಡದ ಸದಸ್ಯರು

“ನಾಟಕೋತ್ಸವದಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ನಾಟಕೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ, ಹಾಗಾಗಿಯೇ ಪಾಸ್‌ಗಳನ್ನು ವಿತರಿಸಲಾಗಿದೆ. ಮಾಸ್ಕ್, ದೈಹಿಕ ಅಂತರ ಕಡ್ಡಾಯ” ಎಂದು ನಾಟಕೋತ್ಸವದ ನಿರ್ವಹಣೆ ನೋಡಿಕೊಳ್ಳುತ್ತಿರುವ ರಂಗಕರ್ಮಿ ನಯನ ಸೂಡ ತಿಳಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...